ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಆತಂಕ ಇರುವ ಹಿನ್ನೆಲೆ ಹೊಸ ವರ್ಷ ಆಚರಣೆಯಲ್ಲಿ ಅಧಿಕ ಜಾಗ್ರತೆ ವಹಿಸುವಂತೆ ಈಗಾಗಲೇ ಸಲಹೆ ಸೂಚನೆಗಳನ್ನು ನೀಡಲಾಗಿದೆ. ಜೊತೆಗೆ ಕೋವಿಡ್ ಸೋಂಕಿತ ವ್ಯಕ್ತಿಗಳಿಗೆ ಕೆಲವು ಮಾರ್ಗಸೂಚಿಗಳನ್ನು ಕಡ್ಡಾಯಗೊಳಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೊರೊನಾ ಸೋಂಕಿತ ವ್ಯಕ್ತಿಗಳು ಕಡ್ಡಾಯವಾಗಿ 7 ದಿನ ಹೋಂ ಐಸೊಲೇಷನ್ ನಲ್ಲಿ ಇರುವಂತೆ, ಹಾಗೆ ಮಾಸ್ಕ್ ಬಳಕೆ ಸೇರಿದಂತೆ ಕೋವಿಡ್ ನಿಯಮಗಳನ್ನು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ಕೋವಿಡ್ ಸಂಬಂಧಿತ ಸಭೆ ಬಳಿಕ ಮಾತನಾಡಿದ ಅವರು ಹೊಸ ವರ್ಷಕ್ಕೆ ಯಾವುದೇ ನಿರ್ಬಂಧ ಇಲ್ಲ ಆದರೆ ಜನರೇ ಹೆಚ್ಚು ದಟ್ಟಣೆ ಇರುವ ಜಾಗದಲ್ಲಿ ಸೇರದೇ ಇರುವಂತೆ ಜಾಗೃತೆ ವಹಿಸಿ.
ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಂಡರೆ ಮಕ್ಕಳನ್ನು ಶಾಲೆಗೆ ಕಳುಹಿಸಬೇಡಿ , ಉದ್ಯೋಗಿಗಳಿಗೂ ಕಡ್ಡಾಯ ರಜೆ ನೀಡಿ ಎಂದು ಸೂಚನೆ ನೀಡಿದ್ದಾರೆ.
ಹೊರಗಡೆ ಓಡಾಡುವಾಗ ಮಾಸ್ಕ್ ಧರಿಸಿ, ಶುಚಿತ್ವ ಕಾಪಾಡಿಕೊಳ್ಳಿ , ರೋಗ ಲಕ್ಷಣಗಳನ್ನು ಕಡೆಗಣಿಸಬೇಡಿ. ಜೆಎನ್.1 ಉಪತಳಿ ರಾಜ್ಯದಲ್ಲಿ ಹರಡುವ ಆತಂಕ ಹೆಚ್ಚಿದೆ.
ಈಗಾಗಲೇ ಟೆಸ್ಟಿಂಗ್ ಹೆಚ್ಚಿಸಿದ್ದು 436 ಪಾಸಿಟಿವ್ ಪ್ರಕರಣದಗಳು ರಾಜ್ಯದಲ್ಲಿ ಇದೆ. ಹೆಚ್ಚುವರಿ ಆಕ್ಸಿಜನ್ ಕಂಟೈನರ್ , ವ್ಯಾಕ್ಸಿನ್ ವ್ಯವಸ್ಥೆ ಮಾಡುತ್ತಿದ್ದೇವೆ ಎಂದು ಸಚಿವರು ಈ ವೇಳೆ ಹೇಳಿದರು.
ಡಿಸೆಂಬರ್ನಲ್ಲಿ ವಜ್ರಮಹೋತ್ಸವ ; ಸಂಭ್ರಮಕ್ಕೆ ಸಿದ್ಧತೆ ಚಿರಂಜೀವಿ ಸಿ.ಹುಲ್ಲಹಳ್ಳಿ ಕರ್ನಾಟಕದ ನೆಲ, ಜಲ, ಭಾಷೆಯ ಏಳಿಗೆಗಾಗಿ ಕಾವ್ಯ, ಸಾಹಿತ್ಯ ಮತ್ತು…
ಡಾ. ಎಂ. ಡಿ. ಉಮೇಶ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ ಮೈಸೂರು ವಿಶ್ವವಿದ್ಯಾನಿಲಯ, ಮೈಸೂರು ಬಳ್ಳಾರಿ ಸಿದ್ದಮ್ಮನವರು ೧೯೦೩ರಲ್ಲಿ ಬಸೆಟಪ್ಪ…
ನಾನು ನನ್ನನ್ನು ಆಳವಾಗಿ ಪರಿಶೋಧಿಸಿಕೊಂಡಂತೆಲ್ಲ ನನ್ನ ಆಂತರಿಕ ಮತ್ತು ಬಾಹ್ಯ ವಿಷಯಗಳಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಶ್ಯಕತೆ ನನಗೆ ತೋರಿತು. ನನ್ನ…
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…