ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ.
ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಶುಚಿಗೊಳಿಸಿ ಗ್ರಾಮೀಣ ಭಾಗದ ಮನೆಗಳು –ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಖಾಲಿ ಜಾಗದಲ್ಲಿ ನೀರು ಧೀರ್ಘಕಾಲ ನಿಲ್ಲದಂತೆ ಕ್ರಮವಹಿಸಬೇಕು, ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಅಲ್ಲದೆ ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳ ಘನತ್ಯಾಜ್ಯ ವಸ್ತುಗಳನ್ನ ಮತ್ತ ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸಚಿವರು ಸೂಚನೆ ನೀಡಿದ್ದಾರೆ. ಒಂದು ವೇಳೆ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕದವರಿಗೆ, ವೋಟ್ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…
ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್ ಹುಸೇನ್ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್ ಹುಸೇನ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…
ಬೆಂಗಳೂರು: ಲಂಕೇಶ್ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್ ಅವರ ಪತ್ನಿ ಇಂದಿರಾ ಲಂಕೇಶ್ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…
ಮುಂಬೈ: ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…