ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಅಲ್ಲದೆ ನಿರುಪಯುಕ್ತ ಮತ್ತು ತ್ಯಾಜ್ಯ ವಸ್ತುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಶೀಘ್ರವಾಗಿ ಹಾಗೂ ಸುರಕ್ಷಿತವಾಗಿ ವಿಲೇವಾರಿ ಮಾಡಬೇಕು ಎಂದು ಸೂಚಿಸಿದ್ದಾರೆ.
ಕುಡಿಯುವ ನೀರಿನ ಸರಬರಾಜು ಟ್ಯಾಂಕ್ ಗಳು, ಸಾರ್ವಜನಿಕ ಶೌಚಾಲಯಗಳಲ್ಲಿ ನೀರು ಶೇಖರಣೆ ಮಾಡುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಶುಚಿಗೊಳಿಸಿ ಗ್ರಾಮೀಣ ಭಾಗದ ಮನೆಗಳು –ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು, ವಾಣಿಜ್ಯ ಸಂಕೀರ್ಣಗಳು ಮತ್ತು ಖಾಲಿ ಜಾಗದಲ್ಲಿ ನೀರು ಧೀರ್ಘಕಾಲ ನಿಲ್ಲದಂತೆ ಕ್ರಮವಹಿಸಬೇಕು, ಆವರಣಗಳು ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.
ಅಲ್ಲದೆ ಗ್ರಾಮಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ಸೌಲಭ್ಯಕ್ಕಾಗಿ ಕಟ್ಟಿಸಿರುವ ತೊಟ್ಟಿಗಳನ್ನ ವಾರಕ್ಕೊಮ್ಮೆ ಕಡ್ಡಾಯವಾಗಿ ಸ್ವಚ್ಛಗೊಳಿಸಬೇಕು. ಖಾಲಿ ನಿವೇಶನಗಳ ಘನತ್ಯಾಜ್ಯ ವಸ್ತುಗಳನ್ನ ಮತ್ತ ಮಳೆ ನೀರು ಸಂಗ್ರಹವಾಗದಂತೆ ಕ್ರಮವಹಿಸಲು ನಿವೇಶನಗಳ ಮಾಲೀಕರಿಗೆ ಸಚಿವರು ಸೂಚನೆ ನೀಡಿದ್ದಾರೆ. ಒಂದು ವೇಳೆ ಸೂಚನೆ ಪಾಲಿಸದವರಿಗೆ ನಿಯಮಾನುಸಾರ ದಂಡ ವಿಧಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…