ರಾಜ್ಯ

ಮಹಿಳಾ ವೈದ್ಯರ ಸುರಕ್ಷತೆಗಾಗಿ ಶೀಘ್ರದಲ್ಲೇ ಮಾರ್ಗಸೂಚಿ: ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ಕೊಲ್ಕತ್ತಾದಲ್ಲಿ ಮಹಿಳಾ ವೈದ್ಯೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶ ವ್ಯಾಪ್ತಿ ನಡೆದ ಪ್ರತಿಭಟೆನೆಗಳ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹಿಳಾ ವೈದ್ಯಕೀಯ ಸಿಬ್ಬಂದಿ ಹಾಗೂ ಮಹಿಳಾ ವೈದ್ಯರ ಸುರಕ್ಷತೆಗಾಗಿ ಸ್ವಯಂಪ್ರೇರಿತವಾಗಿ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲು ಚಿಂತನೆ ನಡೆಸಿದೆ.

ಶುಕ್ರವಾರ(ಆ.23) ವಿಕಾಸ ಸೌಧದಲ್ಲಿ ನಡೆದ ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ವೈದ್ಯಕೀಯ ಶಿಕ್ಷಣ ನಿರ್ದೇಶಕರರಾದ ಡಾ. ಸುಜಾತ ರಾಥೋಡ್ ಅವರಿಗೆ ಮಹಿಳಾ ವೈದ್ಯರ ಸುರಕ್ಷತೆಯ ಬಗ್ಗೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳು/ಪಾಲುದಾರರನ್ನು ಸಂಪರ್ಕಿಸಿ ಸಮಗ್ರವಾದ ಮಾರ್ಗಸೂಚಿಯನ್ನು ರಚಿಸುವಂತೆ ಸೂಚಿಸಿದರು.

ಡಾ. ರಾಥೋಡ್ ಅವರಿಗೆ ಸರ್ಕಾರಿ ವೈದ್ಯಕೀಯ ಕಾಲೇಜುಗಳ ಎಲ್ಲಾ ನಿರ್ದೇಶಕರುಗಳು, ಸರ್ಕಾರಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ವೈದ್ಯರ ಸಂಘ ಸಂಸ್ಥೆಗಳೊಂದಿಗೆ ಸಮಾಲೋಚಿಸಲು ನಿರ್ದೇಶನ ನೀಡಿದರು. ಇದರೊಂದಿಗೆ ಖಾಸಗಿ ಆಸ್ಪತ್ರೆಗಳು, ಮಹಿಳಾ ವೈದ್ಯರು ಇನ್ನಿತರೆ ಪಾಲುದಾರರೊಂದಿಗೆ ಸಮಾಲೋಚಿಸಿ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿ ವಿಶೇಷವಾಗಿ ಮಹಿಳಾ ವೈದ್ಯರ ಸುರಕ್ಷತೆಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ರೂಪಿಸುವಂತೆ ಒತ್ತಿಹೇಳಿದರು.

ಈ ಹಿನ್ನೆಲೆಯಲ್ಲಿ ಮಹಿಳಾ ವೈದ್ಯರ ಸುರಕ್ಷತೆಗಾಗಿ ವೈದ್ಯಕೀಯ ಸಮುದಾಯದ ಸಲಹೆ ಸೂಚನೆಗಳಂತೆ ರಾಜ್ಯ ಸರ್ಕಾರವು ಶೀಘ್ರವೇ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಿದೆ. ಈ ಮಾರ್ಗಸೂಚಿಗಳು ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಸಂಸ್ಥೆಗಳಿಗೆ ಅನ್ವಯವಾಗುತ್ತವೆ ಎಂದು ಸಚಿವರು ಮಾಧ್ಯಮಕ್ಕೆ ತಿಳಿಸಿದರು.

ಕೊಲ್ಕತ್ತಾದ ಆರ್ ಜಿ ಕರ್ ಮೆಡಿಕಲ್ ಕಾಲೇಜಿನಲ್ಲಿ 31 ವರ್ಷದ ವೈದ್ಯೆ ಮೇಲೆ ನಡೆದ ಅತ್ಯಾಚಾರವನ್ನು ತೀವ್ರವಾಗಿ ಖಂಡಿಸಿದ, ಸ್ವತಃ ವೈದ್ಯರಾದ ಡಾ. ಪಾಟೀಲರು ವೃತ್ತಿಪರ ಮಹಿಳೆಯರ ಮೇಲಾಗುವ ದೌರ್ಜನ್ಯವನ್ನು ಸರ್ಕಾರ ಸಹಿಸುವುದಿಲ್ಲ, ಮತ್ತು ಮಹಿಳಾ ವೈದ್ಯರ ಸುರಕ್ಷತೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

4 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

4 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

20 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

21 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

22 hours ago