ರಾಜ್ಯ

ಗುಂಡಿ ಜಟಾಪಟಿ : ಡಿನ್ನರ್‌ ಮೀಟಿಂಗ್‌ ಬಳಿಕ ಡಿಕೆಶಿಯನ್ನು ಹಾಡಿ ಹೊಗಳಿದ ಉದ್ಯಮಿಗಳು

ಬೆಂಗಳೂರು : ಬೆಂಗಳೂರಿನ ಗುಂಡಿ ಸಮಸ್ಯೆ, ಕಸದ ಸಮಸ್ಯೆ, ಮೂಲಭೂತ ಸಮಸ್ಯೆಗಳ ವಿರುದ್ಧ ಉದ್ಯಮಿಗಳು ಸಿಡಿದೆದಿದ್ದರು. ಸರ್ಕಾರದ ವಿರುದ್ಧ ಖಾರವಾಗಿ ಸಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟೀಕೆ ಮಾಡಿದ್ದರು. ಕೆಲ ದಿನ ಸರ್ಕಾರ ವರ್ಸಸ್ ಉದ್ಯಮಿಗಳ ನಡುವೆ ಟ್ವೀಟ್ ವಾರ್, ಟಾಕ್‌ವಾರ್ ನಡೆದಿತ್ತು. ಆದರೆ ಈಗ ಬೆಂಗಳೂರಿನ ಗುಂಡಿ ಸಮಸ್ಯೆ ಬಗ್ಗೆ ಟೀಕಿಸಿದ್ದ ಉದ್ಯಮಿಗಳ ಜೊತೆಯೇ ಉಪಮುಖ್ಯಮಂತ್ರಿ ಡಿಕೆಶಿ ಡಿನ್ನರ್ ಮೀಟಿಂಗ್ ಮಾಡಿದ್ದಾರೆ.

ಬಯೋಕಾನ್ ಮುಖ್ಯಸ್ಥೆ, ಉದ್ಯಮಿ ಕಿರಣ್ ಮಜುಂದಾರ್ ಶಾ ನಿವಾಸದಲ್ಲಿ ಶನಿವಾರ ರಾತ್ರಿ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ನಡೆಸಿದ್ದಾರೆ. ಕಿರಣ್ ಮಜುಂದರ್ ಶಾ, ಉದ್ಯಮಿ ಮೋಹನ್ ದಾಸ್ ಪೈ ಸೇರಿದಂತೆ ಹಲವು ಉದ್ಯಮಿಗಳು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ ರಾವ್ ಸಹ ಡಿನ್ನರ್ ಮೀಟಿಂಗ್‌ನಲ್ಲಿ ಭಾಗಿಯಾಗಿದ್ದರು. ಡಿನ್ನರ್ ಮೀಟಿಂಗ್ ವೇಳೆ ಗುಂಡಿಗಳ ದುರಸ್ತಿ, ಹೊರ ವರ್ತುಲ ರಸ್ತೆಯ ಅಭಿವೃದ್ಧಿ, ನಗರಾದ್ಯಂತ ಸ್ವಚ್ಛತಾ ಅಭಿಯಾನ, ಓಆರ್‌ಆರ್ ಉದ್ದಕ್ಕೂ ನಡೆಯುತ್ತಿರುವ ಮೆಟ್ರೋ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಡಿಸಿಎಂ ಡಿಕೆಶಿಗೆ ಉದ್ಯಮಿಗಳು ಮನವಿ ಮಾಡಿದ್ದಾರೆ.

ಇದನ್ನು ಓದಿ: ಯತೀಂದ್ರ ಹೇಳಿದ್ದು ಅಹಿಂದ ನಾಯಕತ್ವದ ಬಗ್ಗೆ : ಸತೀಶ ಜಾರಕಿಹೊಳಿ ಸ್ಪಷ್ಟನೆ

ಉದ್ಯಮಿಗಳೊಂದಿನ ಡಿನ್ನರ್ ಮೀಟಿಂಗ್ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆಶಿ, ಉದ್ಯಮಿಗಳ ಜೊತೆ ಡಿನ್ನರ್ ಮಿಟಿಂಗ್ ಮಾಡಿದ್ದೀನಿ. ಬೆಂಗಳೂರಿನ ಹಲವು ಸಮಸ್ಯೆಗಳಿಗೆ ಸಲಹೆ ನೀಡಿದ್ದಾರೆ. ಉದ್ಯಮಿಗಳ ಸಲಹೆಯನ್ನ ನಾವು ಸ್ವೀಕರಿಸುತ್ತೇವೆ. ಸರ್ಕಾರ ಒಂದು ನಿರ್ಧಾರ ತೆಗೆದುಕೊಳ್ಳುವಾಗ ದೂರದೃಷ್ಟಿ ಇರುತ್ತದೆ. ನಮಗೆ ಸಲಹೆ ಕೊಡಿ ಆದ್ರೆ ನಮ್ಮನ್ನು ಹರ್ಟ್ ಮಾಡುವಂತೆ ಮಾಡಬೇಡಿ ಅಂತಾ ಹೇಳಿದ್ದೇನೆ ಎಂದರು.

ಡಿಕೆಶಿ ನಡಿಗೆ ಕಾರ್ಯಕ್ರಮ ಮೆಚ್ಚಿ ಪೋಸ್ಟ್
ಇನ್ನು ಶನಿವಾರ ರಾತ್ರಿ ಡಿನ್ನರ್ ಮೀಟಿಂಗ್ ಮೂಲಕ ಉದ್ಯಮಿಗಳನ್ನು ಡಿಕೆ ಶಿವಕುಮಾರ್ ವಿಶ್ವಾಸಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಕಾರ್ಯಕ್ರಮಗಳನ್ನ ಉದ್ಯಮಿಗಳು ಶ್ಲಾಘಿಸಿದ್ದಾರೆ. ಡಿಕೆಶಿ ನಾಗರಿಕರೊಂದಿಗೆ ನಡಿಗೆ ಕಾರ್ಯಕ್ರಮವನ್ನ ಉದ್ಯಮಿ ಮೋಹನ್ ದಾಸ್ ಪೈ ಹೊಗಳಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಬೆಂಗಳೂರಿಗಾಗಿ ಅದ್ಭುತ ಕಾರ್ಯಕ್ರಮ ಮಾಡುತ್ತಿದ್ದೀರಿ. ಈ ಕಾರ್ಯಕ್ರಮದ ಮೂಲಕ ಜನರನ್ನ ಭೇಟಿ ಮಾಡಿ ಸಮಸ್ಯೆ ಪರಿಹರಿಸುವ ದೊಡ್ಡ ಕೆಲಸ ಮಾಡುತ್ತಿದ್ದೀರಿ. ಮೂರು ತಿಂಗಳಲ್ಲಿ ಬೆಂಗಳೂರಿನ ಅಭಿವೃದ್ಧಿ ಬಗ್ಗೆ ಅನೇಕ ಉತ್ತಮ ನಿರ್ಧಾರ ಮಾಡಿದ್ದೀರಿ. ಜಿಬಿಎ ರಚಿಸಿ ಭಾರತದ ದೊಡ್ಡ ನಗರಕ್ಕೆ ಸುಧಾರಣೆ ಮಾಡುತ್ತಿದ್ದೀರಿ. ನೀವು ಎಲ್ಲ ಕಾರ್ಯಗಳನ್ನ ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಡಿಕೆ ಬೆಂಗಳೂರು ನಡಿಗೆ ಕಾರ್ಯಕ್ರಮದ ಕುರಿತ ಪೋಸ್ಟ್ ಟ್ಯಾಗ್ ಮಾಡಿ ಉದ್ಯಮಿ ಮೋಹನ್ ದಾಸ್ ಪೈ ಹೊಗಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

10 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

12 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

12 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

16 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago