ರಾಜ್ಯ

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ ಸಿಬಿಐ ತನಿಖೆಗೆ: ಸಿದ್ದರಾಮಯ್ಯ

ಬೆಂಗಳೂರು : ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಿಎಂ, ‘ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲಿ ಏನಿದೆ?

“ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.

ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.
ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು.

ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ”. ಎಂದು ಟ್ವೀಟ್‌ ಮಾಡಿದ್ದಾರೆ.

ಏನಿದು ಹಗರಣ..? : ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್‌ ಮೇಲಿದೆ. ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರದು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದೆ. 2022ರ ಫೆಬ್ರವರಿ ತಿಂಗಳಿನಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಅಕ್ರಮ ಹಣ ವರ್ಗಾವಣೆ ಆರೋಪಡಿ ಜಾರಿ ನಿರ್ದೇಶನಾಲಯ ಬಂಧಿಸಿತು. ಪ್ರಕರಣ ಸಂಬಂಧ ಇದುವರೆಗೆ ಸಂಸ್ಥೆಯ ಅಧ್ಯಕ್ಷ ಸೆರಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಿಬಿಐಗೆ ಈ ಹಗರಣದ ತನಿಖೆಯನ್ನು ಒಪ್ಪಿಸುವುದಾಗಿ ಈ ಹಿಂದೆ ಹೇಳಿದ್ದರು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

8 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

8 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

8 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

9 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

9 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

9 hours ago