ರಾಜ್ಯ

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ ಸಿಬಿಐ ತನಿಖೆಗೆ: ಸಿದ್ದರಾಮಯ್ಯ

ಬೆಂಗಳೂರು : ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಿಎಂ, ‘ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲಿ ಏನಿದೆ?

“ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.

ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.
ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು.

ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ”. ಎಂದು ಟ್ವೀಟ್‌ ಮಾಡಿದ್ದಾರೆ.

ಏನಿದು ಹಗರಣ..? : ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್‌ ಮೇಲಿದೆ. ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರದು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದೆ. 2022ರ ಫೆಬ್ರವರಿ ತಿಂಗಳಿನಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಅಕ್ರಮ ಹಣ ವರ್ಗಾವಣೆ ಆರೋಪಡಿ ಜಾರಿ ನಿರ್ದೇಶನಾಲಯ ಬಂಧಿಸಿತು. ಪ್ರಕರಣ ಸಂಬಂಧ ಇದುವರೆಗೆ ಸಂಸ್ಥೆಯ ಅಧ್ಯಕ್ಷ ಸೆರಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಿಬಿಐಗೆ ಈ ಹಗರಣದ ತನಿಖೆಯನ್ನು ಒಪ್ಪಿಸುವುದಾಗಿ ಈ ಹಿಂದೆ ಹೇಳಿದ್ದರು.

andolanait

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

3 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

16 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

16 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

16 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

16 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

16 hours ago