ರಾಜ್ಯ

ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ ಸಿಬಿಐ ತನಿಖೆಗೆ: ಸಿದ್ದರಾಮಯ್ಯ

ಬೆಂಗಳೂರು : ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಹಗರಣವನ್ನು ಸಿಬಿಐ ತನಿಖೆಗೆ ವಹಿಸಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಸಿಎಂ, ‘ಶ್ರೀಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ’ ಎಂದು ಬರೆದುಕೊಂಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್‌ನಲ್ಲಿ ಏನಿದೆ?

“ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ.

ಸಾವಿರಾರು ಮಂದಿ ಠೇವಣಿದಾರರು ತಮ್ಮ ನಿವೃತ್ತಿ ಜೀವನಕ್ಕೆ ಆಧಾರವಾಗಲೆಂದು, ಮಕ್ಕಳ ಮದುವೆ, ಸ್ವಂತ ಮನೆ ಖರೀದಿ ಮುಂತಾದ ಕನಸುಗಳನ್ನು ಇಟ್ಟುಕೊಂಡು ತಮ್ಮ ಜೀವಮಾನದ ಉಳಿತಾಯವನ್ನೆಲ್ಲ ಬ್ಯಾಂಕಿನಲ್ಲಿ ಹೂಡಿಕೆ ಮಾಡಿದ್ದರು. ಬ್ಯಾಂಕಿನವರ ವಂಚನೆಯಿಂದಾಗಿ ಅವರೆಲ್ಲರೂ ಮುಂದಿನ ತಮ್ಮ ಜೀವನದ ಬಗ್ಗೆ ದಿಕ್ಕು ತೋಚದಂತಾಗಿದ್ದಾರೆ.
ವಂಚನೆಗೊಳಗಾದ ಠೇವಣಿದಾರರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಈ ಹಿಂದೆ ಪ್ರತಿಪಕ್ಷ ನಾಯಕನಾಗಿದ್ದ ಸಂದರ್ಭದಲ್ಲಿಯೂ ಸದನದ ಒಳಗೆ ಮತ್ತು ಹೊರಗೆ ಧ್ವನಿಯೆತ್ತಿದ್ದೆ, ಪ್ರತಿಭಟನೆಗಳಲ್ಲಿ ಪಾಲ್ಗೊಂಡಿದ್ದೆ. ಆಗಲೂ ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂಬುದು ನಮ್ಮ ಒತ್ತಾಯವಾಗಿತ್ತು.

ಠೇವಣಿ ಹಣ ಕಳೆದುಕೊಂಡವರ ಹತಾಶೆ, ಸಂಕಟವನ್ನು ಕಣ್ಣಾರೆ ಕಂಡಿದ್ದೇನೆ. ಈ ಕಾರಣಕ್ಕಾಗಿ ಸೂಕ್ತ ತನಿಖೆ ನಡೆದು, ಎಲ್ಲ ಸಂತ್ರಸ್ತರಿಗೂ ನ್ಯಾಯ ಸಿಗಲಿ ಎಂಬ ಉದ್ದೇಶದಿಂದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುತ್ತಿದ್ದೇನೆ”. ಎಂದು ಟ್ವೀಟ್‌ ಮಾಡಿದ್ದಾರೆ.

ಏನಿದು ಹಗರಣ..? : ಹೆಚ್ಚಿನ ಬಡ್ಡಿದರದ ಆಮಿಷವೊಡ್ಡಿ ಜನರಿಂದ ಠೇವಣಿ ಪಡೆದು ವಂಚಿಸಿರುವ ಆರೋಪ ಗುರು ರಾಘವೇಂದ್ರ ಬ್ಯಾಂಕ್‌ ಮೇಲಿದೆ. ಬ್ಯಾಂಕ್​​ ಸುಳ್ಳು ಸಾಲಗಾರರ ಖಾತೆ ತೆರದು ಅಕ್ರಮವಾಗಿ ಹಣವನ್ನು ವರ್ಗಾವಣೆ ಮಾಡಿದೆ. 2022ರ ಫೆಬ್ರವರಿ ತಿಂಗಳಿನಲ್ಲಿ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನ ಅಧಿಕಾರಿಯೊಬ್ಬರನ್ನು ಅಕ್ರಮ ಹಣ ವರ್ಗಾವಣೆ ಆರೋಪಡಿ ಜಾರಿ ನಿರ್ದೇಶನಾಲಯ ಬಂಧಿಸಿತು. ಪ್ರಕರಣ ಸಂಬಂಧ ಇದುವರೆಗೆ ಸಂಸ್ಥೆಯ ಅಧ್ಯಕ್ಷ ಸೆರಿದಂತೆ 4 ಮಂದಿಯನ್ನು ಬಂಧಿಸಲಾಗಿದೆ. ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಸಿಬಿಐಗೆ ಈ ಹಗರಣದ ತನಿಖೆಯನ್ನು ಒಪ್ಪಿಸುವುದಾಗಿ ಈ ಹಿಂದೆ ಹೇಳಿದ್ದರು.

andolanait

Recent Posts

ಕಾವೇರಿ ನದಿಯಲ್ಲಿ ಆರು ಜನ ಸಾವು ; ಸಾವಿಗೀಡಾದವರೆಲ್ಲರೂ ಒಂದೇ ಕುಟುಂಬದವರು

ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…

5 hours ago

ಚಾ.ನಗರ ಆಕ್ಸಿಜನ್‌ ದುರಂತ : ಸಂತ್ರಸ್ಥರಿಗೆ ಕೊನೆಗೂ ಒಲಿದ ಸರ್ಕಾರಿ ನೌಕರಿ

ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…

5 hours ago

ಏ.20, 21 ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…

6 hours ago

6 ಮಂದಿ ಸಾವು ಪ್ರಕರಣ ; ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago

ದೇವರನ್ನು ನಂಬಿ, ಮೂಢನಂಬಿಕೆಗಳನ್ನು ತ್ಯಜಿಸಿ : ಸಿಎಂ ಸಿದ್ದರಾಮಯ್ಯ ಕರೆ

ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…

6 hours ago

IPL 2026 | ಸೋಲಿನ ಸರಪಳಿ ಕಳಚಿದ ಕೆಕೆಆರ್‌ ; ರಾಜಸ್ಥಾನ ವಿರುದ್ಧ ಜಯ

ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…

6 hours ago