ರಾಜ್ಯ

ದೇಶದ ಸಂವಿಧಾನ ಸಂರಕ್ಷಣೆ, ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ಸ್ವಾಭಿಮಾನಿ ಸಮಾವೇಶ : ಸಚಿವ ಎಚ್‌.ಸಿ.ಮಹದೇವಪ್ಪ

ಹಾಸನ: ಶೋಷಿತ ವರ್ಗಗಳ ಒಕ್ಕೂಟ ಹಾಗೂ ಕೆಪಿಸಿಸಿ ಸಂಯುಕ್ತಾಶ್ರಯದಲ್ಲಿ ಡಿಸೆಂಬರ್‌ 5 ರಂದು ನಡೆಯಲಿರುವ ಸ್ವಾಭಿಮಾನಿ ಸಮಾವೇಶವೂ ದೇಶದ ಸಂವಿಧಾನ ಸಂರಕ್ಷಣೆ, ಪ್ರಜಾಪ್ರಭುತ್ವದ ಬಲವರ್ಧನೆಗಾಗಿ ನಡೆಸುವ ಸಮಾವೇಶವಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ಸಿ.ಮಹದೇವಪ್ಪ ತಿಳಿಸಿದರು.

ಈ ಕುರಿತು ಹಾಸನದಲ್ಲಿ ಇಂದು(ನ.29) ಸುದ್ದಿಗೋಷ್ಠಿಯನ್ನು ನಡೆಸಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಶೋಷಿತ ಸಮುದಾಯಗಳ ಒಕ್ಕೂಟದ ಜನರು ಹಾಸನದಲ್ಲಿ ಸ್ವಾಭಿಮಾನಿ ಸಮಾವೇಶ ಮಾಡಬೇಕೆಂದು ಮನವಿ ಮಾಡಿದ ಹಿನ್ನೆಲೆಯಲ್ಲಿ ಸಮಾವೇಶವನ್ನು ನಡೆಸಲಾಗುತ್ತಿದೆ. ಈ ಸಮಾವೇಶವನ್ನು ಮುಖ್ಯವಾಗಿ ಕೋಮುವಾದ ಹಾಗೂ ಮತೀಯವಾದವನ್ನು ಅಳಿಸಿ, ಸಂವಿಧಾನ ಸಂರಕ್ಷಣೆ ಮಾಡಿ ಪ್ರಜಾಪ್ರಭುತ್ವವನ್ನು ಬಲವರ್ಧನೆಗೊಳಿಸಬೇಕೆಂಬುದಾಗಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಅವರು ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ಶೋಷಿತ ವರ್ಗಗಳ ಪರವಾಗಿ ಹೋರಾಟ ಮಾಡಿದವರಾಗಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಹಾಗೂ ಶೊಷಿತ ವರ್ಗಗಳ ಸಮುದಾಯಗಳ ಒಕ್ಕೂಟ ಸೇರಿ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

ಕಾಂಗ್ರೆಸ್‌ನ ಹೋರಾಟಗಳು ಮತ್ತು ಶೋಷಿತ ವರ್ಗಗಳ ಸೈದ್ಧಾಂತಿಕ ವಿಚಾರಗಳ ಹೋಲಿಕೆಯಾಗಿರುವುದರಿಂದ ಸಮಾವೇಶವನ್ನು ನಡೆಸಬೇಕೆಂದು ತೀರ್ಮಾನಿಸಲಾಗಿದೆ. ಈ ಸಮಾವೇಶದಲ್ಲಿ ಕಾಂಗ್ರೆಸ್‌ ಸಚಿವರು, ಶಾಸಕರು ಹಾಗೂ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

10 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

10 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

10 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

10 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

10 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

10 hours ago