ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಬಿಜೆಪಿ ಹಾಗೂ ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತನೆ ಮಾಡುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಮೂಲಕ ಟೀಕೆ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದಲ್ಲಿ ಯಾವ ಪಕ್ಷದ ಸರ್ಕಾರ ಇದ್ದರೂ ನೀವು ಮುಲಾಜಿಗೆ ಬೀಳದೆ ಕರ್ನಾಟಕದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ದನಿ ಎತ್ತುತ್ತಾ ಬಂದವರು. ಆ ಮುತ್ಸದ್ದಿ ದೇವೇಗೌಡರನ್ನು ಕಾಣಲು ಕನ್ನಡಿಗರು ಬಯಸುತ್ತಿದ್ದಾರೆ. ಆದರೆ ಈಗಿನ ದೇವೇಗೌಡರು ಬಿಜೆಪಿ ಮತ್ತು ನರೇಂದ್ರ ಮೋದಿಯವರ ಚಿಯರ್ ಲೀಡರ್ ರೀತಿ ವರ್ತಿಸುತ್ತಿದ್ದಾರೆ ಎಂದು ವಿಷಾದದಿಂದ ಹೇಳಬೇಕಾಗಿದೆ ಎಂದು ವ್ಯಂಗ್ಯವಾಡಿದರು.
ದೈಹಿಕವಾಗಿ ನೀವು ಸ್ವಲ್ಪ ಕುಗ್ಗಿದಂತೆ ಕಂಡರೂ ಮಾನಸಿಕವಾಗಿ ನೀವಿನ್ನೂ ದೃಡವಾಗಿದ್ದೀರಿ. ದಯವಿಟ್ಟು ಈಗಲಾದರೂ ಪಕ್ಷ ರಾಜಕಾರಣವನ್ನು ಮೀರಿ ಒಬ್ಬ ಮುತ್ಸದ್ದಿ ನಾಯಕನ ರೀತಿಯಲ್ಲಿ ಕನ್ನಡ, ಕನ್ನಡಿಗ ಹಾಗೂ ಕರ್ನಾಟಕದ ಹಿತ ರಕ್ಷಣೆಗೆ ಮುಂದಾಗಬೇಕೆಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ನಿಟ್ಟಿನಲ್ಲಿ ನೀವು ಮಾಡುವ ಪ್ರಯತ್ನಕ್ಕೆ ನಮ್ಮ ಸರ್ಕಾರದ ಸಂಪೂರ್ಣ ಬೆಂಬಲ ಇದೆ. ಏಳು ಕೋಟಿ ಕನ್ನಡಿಗರೂ ನಿಮ್ಮ ಜೊತೆಯಲ್ಲಿ ಇರುತ್ತಾರೆ ಎಂಬ ಭರವಸೆಯೂ ನನಗಿದೆ.
ಹಿಂದೆಲ್ಲ ರಾಜ್ಯದ ಹಿತಾಸಕ್ತಿಯ ರಕ್ಷಣೆಯ ಪ್ರಶ್ನೆ ಎದುರಾದಾಗ ಒಬ್ಬ ಮುತ್ಸದ್ದಿಯಾಗಿ ಇದಕ್ಕಿಂತಲೂ ಮುಖ್ಯವಾಗಿ ಒಬ್ಬ ಹೆಮ್ಮೆಯ ಕನ್ನಡಿಗನಾಗಿ ರಾಜ್ಯಕ್ಕೆ ನ್ಯಾಯ ಕೊಡಲು ನೀವು ಹೋರಾಟ ನಡೆಸಿದ್ದನ್ನು ರಾಜ್ಯದ ಜನರು ಗಮನಿಸಿದ್ದಾರೆ. ಆದರೆ ಇತ್ತೀಚೆಗೆ ನೀವು ಮತ್ತು ನಿಮ್ಮ ಪಕ್ಷ ಕೇಂದ್ರ ಸರ್ಕಾರದ ವಕ್ತಾರರಂತೆ ಪಕ್ಷಪಾತಿಯಾಗಿ ವರ್ತಿಸುತ್ತಿರುವುದನ್ನು ಕೂಡಾ ನನ್ನನ್ನೂ ಸೇರಿದಂತೆ ಏಳು ಕೋಟಿ ಕನ್ನಡಿಗರು ಗಮನಿಸುತ್ತಿದ್ದಾರೆ. ಕೇಂದ್ರ ಸಂಪುಟದಲ್ಲಿ ಮಗನನ್ನು ಸಚಿವನನ್ನಾಗಿ ಮಾಡಲು ಗೌಡರು ಇಷ್ಟೊಂದು ರಾಜಿ ಮಾಡಿಕೊಳ್ಳುವ ಅಗತ್ಯ ಇತ್ತಾ? ಎಂದು ಜನ ಪ್ರಶ್ನಿಸುತ್ತಿದ್ದಾರೆ.
ನೀರಾವರಿ ವಿಚಾರದಲ್ಲಿ ನ್ಯಾಯ ಪಕ್ಷಪಾತಿಯಾಗಿ ಕರ್ನಾಟಕದ ಹಿತಾಸಕ್ತಿಯ ರಕ್ಷಣೆ ಮಾಡಬೇಕಾಗಿದ್ದ ಕೇಂದ್ರದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಸತತವಾಗಿ ಕನ್ನಡಿಗರ ಹಿತವನ್ನು ಬಲಿಗೊಡಲು ಹೊರಟಿರುವುದನ್ನು ಸನ್ಮಾನ್ಯ ದೇವೇಗೌಡರಿಗೆ ನಾನು ಬಿಡಿಸಿ ಹೇಳಬೇಕಾಗಿಲ್ಲ ಎಂದು ಹೇಳಿದ್ದಾರೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…