ಬೆಂಗಳೂರು: ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ವಾಜಪೇಯಿ ಅವರ ಜನ್ಮಶತಾಬ್ದಿ ಅಂಗವಾಗಿ ಬೆಂಗಳೂರಿನಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಸುಶಾಸನ ದಿನಾಚರಣೆ ಕಾರ್ಯಕ್ರಮದಲ್ಲಿ ಅಟಲ್ ಪುರಸ್ಕಾರ ಸ್ವೀಕರಿಸಿ ಮಾತನಾಡಿದರು.
ಸಭೆಯಲ್ಲಿ ತಮಗೂ ಮೊದಲು ಭಾಷಣ ಮಾಡಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರ ಮಾತುಗಳನ್ನು ಬಹುವಾಗಿ ಮೆಚ್ಚಿಕೊಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು, ಸಂತೋಷ್ ಅವರು ಯಾವುದೇ ಅಧಿಕಾರಕ್ಕೆ ಆಸೆಪಟ್ಟವರಲ್ಲ. ಕೇಂದ್ರ, ರಾಜ್ಯದಲ್ಲಿ ಮಂತ್ರಿ ಆಗಬೇಕು ಎಂದು ಆಸೆಪಟ್ಟವರಲ್ಲ. ನಿಸ್ವಾರ್ಥದಿಂದ ಪಕ್ಷ ಕಟ್ಟುತ್ತಿದ್ದಾರೆ. ಮೊದಲ ಬಾರಿಗೆ ನಿಮ್ಮ ಭಾಷಣ ಕೇಳಿದ್ದೇನೆ. ಪ್ರಜಾಪ್ರಭುತ್ವದ ಬಗ್ಗೆ, ಮೋದಿ, ಶಾ ಅವರ ಬಗ್ಗೆ ಎದುರಾಳಿಗಳು ಮಾತನಾಡುತ್ತಾರೆ. ಅವರ ಮಾತು ಪೊಳ್ಳು. ಅದಕ್ಕೆ ಬೆಲೆ ಇಲ್ಲ ಎನ್ನುವುದನ್ನು ಜನರ ಮನ ಮುಟ್ಟುವಂತೆ ಮಾತಾಡಿದ್ದೀರಿ. ಮೊದಲ ಬಾರಿಗೆ ನಿಮ್ಮ ಜೊತೆ ನಾನು ವೇದಿಕೆ ಹಂಚಿಕೊಂಡಿದ್ದೇನೆ. ನಿಮ್ಮಲ್ಲಿ ಏನು ಶಕ್ತಿ ಇದೆ ಎಂದು ಅರ್ಥ ಮಾಡಿಕೊಂಡಿದ್ದೇನೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ನಿವೃತ್ತ ಐಎಎಸ್ ಅಧಿಕಾರಿ ಮದನ ಗೋಪಾಲ್, ಉನ್ನತ ಶಿಕ್ಷಣ ಮಂಡಳಿಯ ಮಾಜಿ ಅಧ್ಯಕ್ಷ ತಿಮ್ಮೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…