ರಾಜ್ಯ

ಮನಮೋಹನ್‌ ಸಿಂಗ್‌ ನಿಧನ: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರಿಂದ ಶ್ರದ್ಧಾಂಜಲಿ

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರು ಗುರುವಾರ ತಡರಾತ್ರಿ ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಬೆಂಗಳೂರಿನ ಜೆ.ಪಿ ಭವನದ ಜೆಡಿಎಸ್ ಕಚೇರಿಯಲ್ಲಿ ಇಂದು(ಡಿಸೆಂಬರ್‌.27) ಮನಮೋಹನ್ ಸಿಂಗ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಬಳಿಕ ಮಾತನಾಡಿದ ಅವರು, ಮನಮೋಹನ್‌ ಸಿಂಗ್‌ರ ನಿಧನ ಈ ದೇಶಕ್ಕೆ ತುಂಬಲಾರದ ನಷ್ಟ. ನಾನು ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದು 1991ರಲ್ಲಿ ಆಗ ಅವರು ವಿಶ್ವಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಭಾರತ ದೇಶಕ್ಕೆ ಅವರು 2 ಬಾರಿ ಪ್ರಧಾನಿಯಾಗಿ ಸುರ್ದೀಘ ಸೇವೆ ಸಲ್ಲಿಸಿದ್ದಾರೆ. ಅವರ ಅಗಲಿಕೆಯಿಂದ ನನಗೆ ವೈಯಕ್ತಿಕವಾಗಿ ಬೇಸರ ತಂದಿದೆ. ಅವರ ಆತ್ಮಕ್ಕೆ ಭಗವಂತ ಮೋಕ್ಷ ಕೊಡಲಿ. ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.

ನಾನು ಕರ್ನಾಟಕದಿಂದ ಮೊದಲ ಬಾರಿ ಲೋಕಸಭೆಗೆ ಪ್ರವೇಶಿಸಿದಾಗ ಸಿಂಗ್‌ ಅವರು ನರಸಿಂಹ ರಾವ್ ಸರ್ಕಾರದಲ್ಲಿ ಹಣಕಾಸು ಮಂತ್ರಿಯಾಗಿದ್ದರು. ಅಲ್ಲದೇ ಅವರು ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಇನ್ನೂ ನಮ್ಮ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸಲು ಕೆಲಸ ಮಾಡಿದ್ದಾರೆ. ಆರ್ಥಿಕ ತಜ್ಞರಾಗಿ ವಿಶ್ವ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸಿ ಆರ್ಥಿಕ ಬುದ್ಧಿವಂತರಾಗಿದ್ದರು ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago