ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ಕೊಟ್ಟಿದ್ದಾರೆ.
ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಈ ಮೂಲಕ ಸರ್ಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಡಿಕೆಶಿ ಟಾಂಗ್ ಕೊಟ್ಟಿದ್ದಾರೆ.
ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.
ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ.? ನಮಗೂ ರಾಜಕಾರಣ ಬರುತ್ತದೆ. ಅದರೆ ನಮಗೆ ರಾಜಕಾರಣ ಮುಖ್ಯವಲ್ಲ. ಜನರ ಸೇವೆ ಮುಖ್ಯ ಎಂದು ವಾಗ್ದಾಳಿ ನಡೆಸಿದರು.
ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಕರ್ತವ್ಯ. ಹಲವಾರು ಮಂದಿ ತಮ್ಮ ಕ್ಷೇತ್ರದ ಜನರ ಸಮಸ್ಯೆ, ಜಮೀನು ಖಾತೆ, ವೈಯಕ್ತಿಕ ಕುಂದು ಕೊರತೆಗಳು, ಪಕ್ಷದಲ್ಲಿ ಹುದ್ದೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಹೊತ್ತು ತಂದಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಬಗೆಹರಿಸುವಂತಹ ಸಮಸ್ಯೆಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಆಯಾಯ ಇಲಾಖೆಗಳಿಗೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.
ದಾ.ರಾ.ಮಹೇಶ್ ಪರಿಷ್ಕತ ಶುಲ್ಕ ಸೆಪ್ಟೆಂಬರ್ ೧ರಿಂದ ಜಾರಿ; ಸಫಾರಿ ಸಮಯ ೧ ಗಂಟೆ ಹೆಚ್ಚಳ ಹನಗೋಡು : ಬಂಡೀಪುರ ಮತ್ತು…
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…