ರಾಜ್ಯ

ಎಚ್‌ಡಿಕೆ ಕೆಲಸ ಮಾಡಿಲ್ಲವೆನ್ನುವುದಕ್ಕೆ ಆ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ಕೊಟ್ಟಿದ್ದಾರೆ.

ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಈ ಮೂಲಕ ಸರ್ಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಡಿಕೆಶಿ ಟಾಂಗ್‌ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ.? ನಮಗೂ ರಾಜಕಾರಣ ಬರುತ್ತದೆ. ಅದರೆ ನಮಗೆ ರಾಜಕಾರಣ ಮುಖ್ಯವಲ್ಲ. ಜನರ ಸೇವೆ ಮುಖ್ಯ ಎಂದು ವಾಗ್ದಾಳಿ ನಡೆಸಿದರು.

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಕರ್ತವ್ಯ. ಹಲವಾರು ಮಂದಿ ತಮ್ಮ ಕ್ಷೇತ್ರದ ಜನರ ಸಮಸ್ಯೆ, ಜಮೀನು ಖಾತೆ, ವೈಯಕ್ತಿಕ ಕುಂದು ಕೊರತೆಗಳು, ಪಕ್ಷದಲ್ಲಿ ಹುದ್ದೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಹೊತ್ತು ತಂದಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಬಗೆಹರಿಸುವಂತಹ ಸಮಸ್ಯೆಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಆಯಾಯ ಇಲಾಖೆಗಳಿಗೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಫಾರಿ ಟಿಕೆಟ್ ದರ ಹೆಚ್ಚಳ; ಪ್ರವಾಸಿಗರಿಗೆ ಹೊರೆ

ದಾ.ರಾ.ಮಹೇಶ್ ಪರಿಷ್ಕತ ಶುಲ್ಕ ಸೆಪ್ಟೆಂಬರ್ ೧ರಿಂದ ಜಾರಿ; ಸಫಾರಿ ಸಮಯ ೧ ಗಂಟೆ ಹೆಚ್ಚಳ ಹನಗೋಡು : ಬಂಡೀಪುರ ಮತ್ತು…

2 mins ago

ದಸರಾ ಯಶಸ್ವಿಗೆ 17 ಉಪಸಮಿತಿಗಳ ರಚನೆ

ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…

10 hours ago

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

24 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

24 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 day ago