ರಾಜ್ಯ

ಎಚ್‌ಡಿಕೆ ಕೆಲಸ ಮಾಡಿಲ್ಲವೆನ್ನುವುದಕ್ಕೆ ಆ 10 ಸಾವಿರ ಅರ್ಜಿಗಳೇ ಸಾಕ್ಷಿ: ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಎಚ್.ಡಿ.ಕುಮಾರಸ್ವಾಮಿ ಶಾಸಕರಾಗಿದ್ದ ಚನ್ನಪಟ್ಟಣದಲ್ಲಿ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ೧೦ ಸಾವಿರ ಅರ್ಜಿಗಳನ್ನು ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಜನರ ಪರ ಕೆಲಸ ಮಾಡಿಲ್ಲ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ಕೊಟ್ಟಿದ್ದಾರೆ.

ಮಂಡ್ಯದ ಜನತಾದರ್ಶನದಲ್ಲಿ ಮೂರುವರೆ ಸಾವಿರ ಅರ್ಜಿಗಳನ್ನು ಸ್ವೀಕಾರ ಮಾಡಿದ್ದೇನೆ. ಈ ಮೂಲಕ ಸರ್ಕಾರ ಜನರ ಸಮಸ್ಯೆ ನಿವಾರಿಸುವಲ್ಲಿ ವಿಫಲವಾಗಿದೆ. ಸಚಿವರು, ಶಾಸಕರು ಕೆಲಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಆರೋಪದ ಬಗ್ಗೆ ಡಿಕೆಶಿ ಟಾಂಗ್‌ ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರು ಏನೋ ಒಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ತಮ್ಮ ಸಮಸ್ಯೆಗಳ ನಿವಾರಣೆಗೆ ಚನ್ನಪಟ್ಟಣದ ಜನರು ಸಾವಿರಾರು ಅರ್ಜಿ ಕೊಟ್ಟಿರುವುದಕ್ಕೆ ನಮ್ಮ ಬಳಿ ದಾಖಲೆಗಳಿವೆ. ದೂರವಾಣಿ ಸಂಖ್ಯೆಯಿದೆ. ಇದಕ್ಕೆ ಏನು ಹೇಳಬೇಕು ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿ ಒಬ್ಬರೇ ರಾಜಕಾರಣ ಮಾಡುತ್ತಿದ್ದಾರಾ.? ನಮಗೂ ರಾಜಕಾರಣ ಬರುತ್ತದೆ. ಅದರೆ ನಮಗೆ ರಾಜಕಾರಣ ಮುಖ್ಯವಲ್ಲ. ಜನರ ಸೇವೆ ಮುಖ್ಯ ಎಂದು ವಾಗ್ದಾಳಿ ನಡೆಸಿದರು.

ಪಕ್ಷವನ್ನು ಅಧಿಕಾರಕ್ಕೆ ತಂದ ಕಾರ್ಯಕರ್ತರ ಸಮಸ್ಯೆಗಳನ್ನು ಬಗೆಹರಿಸುವುದು ನಮ್ಮ ಕರ್ತವ್ಯ. ಹಲವಾರು ಮಂದಿ ತಮ್ಮ ಕ್ಷೇತ್ರದ ಜನರ ಸಮಸ್ಯೆ, ಜಮೀನು ಖಾತೆ, ವೈಯಕ್ತಿಕ ಕುಂದು ಕೊರತೆಗಳು, ಪಕ್ಷದಲ್ಲಿ ಹುದ್ದೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಹೊತ್ತು ತಂದಿದ್ದಾರೆ. ನಮ್ಮ ವ್ಯಾಪ್ತಿಯಲ್ಲಿ ಬಗೆಹರಿಸುವಂತಹ ಸಮಸ್ಯೆಗಳನ್ನು ಶೀಘ್ರ ವಿಲೇವಾರಿ ಮಾಡಲಾಗುವುದು. ಆಯಾಯ ಇಲಾಖೆಗಳಿಗೆ ಕಳಿಸುವ ವ್ಯವಸ್ಥೆ ಮಾಡಲಾಗುವುದು ಎಂದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

2 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

8 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

12 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

12 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

12 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

15 hours ago