ಬೆಂಗಳೂರು: ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸತ್ ಹಾಗೂ ಸುವರ್ಣಸೌಧದಲ್ಲಿ ಸದನ ಕಲಾಪ ನಡೆಯುತ್ತಿರುವ ಕಾರಣ ಈ ವೇಳೆ ಸಂಭ್ರಮದ ಹುಟ್ಟು ಹಬ್ಬದ ಆಚರಣೆ ಬೇಡ ಎಂದು ಅಭಿಮಾನಿಗಳಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಡಿಸೆಂಬರ್ 16ರಂದು ನನ್ನ ಜನ್ಮದಿನವಾಗಿದ್ದು, ಪ್ರತಿವರ್ಷ ನೀವೆಲ್ಲಾ ಬಹಳ ಅರ್ಥಪೂರ್ಣವಾಗಿ ನನ್ನ ಹುಟ್ಟುಹಬ್ಬ ಆಚರಿಸುತ್ತಾ ನನ್ನ ಬದುಕಿಗೆ ಸಾರ್ಥಕತೆ ತಂದು ಕೊಟ್ಟಿದ್ದೀರಿ. ರಾಜಕೀಯವಾಗಿ ನನ್ನ ಯಶಸ್ಸಿಗೆ ಮೂಲ ಆಧಾರಸ್ತಂಭವೇ ತಾವುಗಳು. ಆ ಕೃತಜ್ಞತಾ ಭಾವದಿಂದ ನಿಮ್ಮಲ್ಲಿ ನನ್ನದೊಂದು ವಿನಮ್ರ ಕಳಕಳಿಯ ಮನವಿ ಮಾಡುತ್ತಿದ್ದೇನೆ.
ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಸಂಸತ್ ಅಧಿವೇಶನ ನಡೆಯುತ್ತಿದೆ. ಹೀಗಾಗಿ ನಾನು ನವದೆಹಲಿಯಲ್ಲಿಯೇ ಉಳಿಯಬೇಕಾಗಿದೆ. ಅಲ್ಲದೇ ಬೆಳಗಾವಿ ಸುವರ್ಣಸೌಧದಲ್ಲಿ ಕಲಾಪವೂ ನಡೆಯುತ್ತಿದೆ. ಇಂತಹ ಸನ್ನಿವೇಶದಲ್ಲಿ ವಿಜೃಂಭಣೆಯ ಹುಟ್ಟುಹಬ್ಬ ಬೇಡ ಎನ್ನುವುದು ನನ್ನ ಅಭಿಪ್ರಾಯವಾಗಿದೆ ಎಂದು ಹೇಳಿದ್ದಾರೆ.
ಇನ್ನು ತಾವುಗಳು ಇದ್ದಲ್ಲಿಂದಲೇ ನನ್ನನ್ನು ಹರಸಿ, ಆಶೀರ್ವಾದಿಸಿ ಅಷ್ಟು ಸಾಕು ನನಗೆ. ಸಾಧ್ಯವಾದರೆ ಸಮಾಜಕ್ಕೆ, ದುರ್ಬಲ ಜನರಿಗೆ ಏನಾದರೂ ಸಹಾಯ ಮಾಡಿ. ಜನಸೇವೆಯೇ ಜಾತ್ಯತೀತ ಜನತಾದಳ ಪಕ್ಷದ ಮೂಲ ತತ್ವವಾಗಿದೆ. ಅದೇ ನನಗೆ ತಾವು ಕೊಡುವ ಉಡುಗೊರೆ ಎಂದು ತಿಳಿಸಿದ್ದಾರೆ.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…