ರಾಜ್ಯ

ಅಂತೂ ನನ್ನ ಅನುಮಾನ ನಿಜವಾಯಿತು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌

ಬೆಂಗಳೂರು: ಜಾತಿ ಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ (C M Siddaramaiah) ಈಗ ಉಲ್ಟಾ ಹೊಡೆದಿದ್ದು, ಅಂತೂ ನನ್ನ ಅನುಮಾನ ಈಗ ನಿಜವಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H D Kumaraswamy) ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಉಲ್ಟಾ ಹೊಡೆದಿದ್ದಾರೆ! ‘ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ’ ಎಂದು ಹೊಸ ಪೀಪಿ ಊದುತ್ತಿದ್ದಾರೆ.

ಹಾಗಾದರೆ ಹಾದಿ ಬೀದಿಯಲ್ಲಿ ತೇಲಾಡುತ್ತಿರುವ, ಬಿದ್ದೂ ಬಿದ್ದು ಹೊರಳಾಡುತ್ತಿರುವ ಅಂಕಿ ಸಂಖ್ಯೆಗಳು ಏನು? ಸೋರಿಕೆಯಾಗಿರುವ ದತ್ತಾಂಶ ಮತ್ತು ಸಿಎಂ ಅವರು ಹೇಳಿದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ದತ್ತಾಂಶವು ಎರಡೂ ಒಂದೇನಾ? ಅಥವಾ ಅಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

ವರದಿ ಬಹಿರಂಗಕ್ಕೆ ಮೊದಲೇ ವ್ಯವಸ್ಥಿತವಾಗಿ ಸೋರಿಕೆ ಮಾಡಿದ್ದು ಯಾರು? ಅದರ ಹಿಂದಿರುವ ಕಳ್ಳ ಕೈ ಯಾವುದು? ಬೀದಿಪಾಲಾದ ದತ್ತಾಂಶ ಇಟ್ಟುಕೊಂಡು ಏನು ಮಾಡುತ್ತೀರಿ?

ಸಿಎಂ ಸಾಹೇಬರೇ.. ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ. ಅದು ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ ಸೇರಿದ ಮೇಲೆ ಸೋರಿಕೆ ಆಯಿತಾ? ಅಥವಾ ನಿಮ್ಮ ಗ್ಯಾಂಗ್ ಕೈ ಚಳಕವಾ? ತನಿಖೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೀರಾ? ನೀವೇ ಹೇಳಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಸೋರಿಕೆಗೆ ನಿಮ್ಮ ಸರಕಾರವೇ ಹೊಣೆ, ಅದರಲ್ಲಿ ಯಾವುದೇ ಸಂಶಯವೇ ಇಲ್ಲ. ಯಾವುದೇ ಕಾರಣಕ್ಕೂ ಸೋರಿಕೆಯಾದ ಈ ವರದಿಯನ್ನು ಸಂಪುಟದಲ್ಲಿ ಮಂಡಿಸಲೇಬಾರದು. ಮಂಡಿಸಿ ಸಂಪುಟದ ಪಾವಿತ್ರ್ಯತೆ ಹಾಳು ಮಾಡಬೇಡಿ. ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರ. ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

12 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

13 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

13 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

17 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago