ರಾಜ್ಯ

ಅಂತೂ ನನ್ನ ಅನುಮಾನ ನಿಜವಾಯಿತು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌

ಬೆಂಗಳೂರು: ಜಾತಿ ಗಣತಿ ವರದಿ ಬಗ್ಗೆ ಸಿಎಂ ಸಿದ್ದರಾಮಯ್ಯ (C M Siddaramaiah) ಈಗ ಉಲ್ಟಾ ಹೊಡೆದಿದ್ದು, ಅಂತೂ ನನ್ನ ಅನುಮಾನ ಈಗ ನಿಜವಾಯಿತು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H D Kumaraswamy) ಹೇಳಿದ್ದಾರೆ. ಸಿದ್ದರಾಮಯ್ಯನವರು ಈಗ ಉಲ್ಟಾ ಹೊಡೆದಿದ್ದಾರೆ! ‘ಅದು ಜಾತಿ ಸಮೀಕ್ಷೆ ಅಲ್ಲ.. ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ’ ಎಂದು ಹೊಸ ಪೀಪಿ ಊದುತ್ತಿದ್ದಾರೆ.

ಹಾಗಾದರೆ ಹಾದಿ ಬೀದಿಯಲ್ಲಿ ತೇಲಾಡುತ್ತಿರುವ, ಬಿದ್ದೂ ಬಿದ್ದು ಹೊರಳಾಡುತ್ತಿರುವ ಅಂಕಿ ಸಂಖ್ಯೆಗಳು ಏನು? ಸೋರಿಕೆಯಾಗಿರುವ ದತ್ತಾಂಶ ಮತ್ತು ಸಿಎಂ ಅವರು ಹೇಳಿದ ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ದತ್ತಾಂಶವು ಎರಡೂ ಒಂದೇನಾ? ಅಥವಾ ಅಲ್ಲವಾ? ಎಂದು ಪ್ರಶ್ನೆ ಮಾಡಿದ್ದಾರೆ.

ವರದಿ ಬಹಿರಂಗಕ್ಕೆ ಮೊದಲೇ ವ್ಯವಸ್ಥಿತವಾಗಿ ಸೋರಿಕೆ ಮಾಡಿದ್ದು ಯಾರು? ಅದರ ಹಿಂದಿರುವ ಕಳ್ಳ ಕೈ ಯಾವುದು? ಬೀದಿಪಾಲಾದ ದತ್ತಾಂಶ ಇಟ್ಟುಕೊಂಡು ಏನು ಮಾಡುತ್ತೀರಿ?

ಸಿಎಂ ಸಾಹೇಬರೇ.. ಸೋರಿಕೆ ಬಗ್ಗೆ ತಪ್ಪದೇ ತನಿಖೆ ಮಾಡಿಸಿ. ಅದು ಆಯೋಗದಿಂದ ಸೋರಿಕೆ ಆಯಿತಾ? ಅಥವಾ ಸಂಪುಟದಲ್ಲಿ ಸಚಿವರ ಕೈ ಸೇರಿದ ಮೇಲೆ ಸೋರಿಕೆ ಆಯಿತಾ? ಅಥವಾ ನಿಮ್ಮ ಗ್ಯಾಂಗ್ ಕೈ ಚಳಕವಾ? ತನಿಖೆ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೀರಾ? ನೀವೇ ಹೇಳಬೇಕು ಎಂದು ಪ್ರಶ್ನೆ ಮಾಡಿದ್ದಾರೆ.

ಇನ್ನು ಸೋರಿಕೆಗೆ ನಿಮ್ಮ ಸರಕಾರವೇ ಹೊಣೆ, ಅದರಲ್ಲಿ ಯಾವುದೇ ಸಂಶಯವೇ ಇಲ್ಲ. ಯಾವುದೇ ಕಾರಣಕ್ಕೂ ಸೋರಿಕೆಯಾದ ಈ ವರದಿಯನ್ನು ಸಂಪುಟದಲ್ಲಿ ಮಂಡಿಸಲೇಬಾರದು. ಮಂಡಿಸಿ ಸಂಪುಟದ ಪಾವಿತ್ರ್ಯತೆ ಹಾಳು ಮಾಡಬೇಡಿ. ನೆಮ್ಮದಿಯಾಗಿದ್ದ ರಾಜ್ಯಕ್ಕೆ ಬೆಂಕಿ ಹಾಕಿದ್ದೀರ. ಜಾತಿಗಳ ಮಧ್ಯೆ ವಿಷಬೀಜ ಬಿತ್ತಿದ್ದೀರಿ. ನಿಮ್ಮ ದುರುದ್ದೇಶ, ದುಷ್ಟತನದ ಪರಾಕಾಷ್ಠೆ ಇದು. ಸರ್ವ ಜನಾಂಗದ ಶಾಂತಿಯ ತೋಟಕ್ಕೆ ಕೊಳ್ಳಿ ಇಟ್ಟ ಪಾಪ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

18 mins ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

1 hour ago

ಸ್ವಚ್ಛತಾ ಅಭಿಯಾನ | ವಿವಿಧೆಡೆ 15 ಟನ್‌ ತ್ಯಾಜ್ಯ ವಿಲೇವಾರಿ

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…

2 hours ago

ನೇಪಾಳ ಪ್ರವಾಹ | 105 ಭಾರತೀಯರು ಸೇರಿ 400 ಮಂದಿ ನಾಪತ್ತೆ

ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…

3 hours ago

ನೇಪಾಳದಲ್ಲಿ ಭೀಕರ ಪ್ರವಾಹ | ಹತ್ತಾರು ಹಳ್ಳಿಗಳು ಜಲಾವೃತ ; ನಾಪತ್ತೆಯಾದ ಪ್ರವಾಸಿಗರು

ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…

3 hours ago

ರಾಜೀನಾಮೆ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ: ಸಚಿವ ನಾಗೇಂದ್ರ

ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…

7 hours ago