ಬೆಂಗಳೂರು: ಮಂಡ್ಯ ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾನಿಲಯ ಸ್ಥಾಪನೆಗೆ ನನ್ನ ಹೃದಯ ಪೂರ್ವಕ ಸ್ವಾಗತವಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ. ಜಿಲ್ಲೆಯಲ್ಲಿ ಕೃಷಿ ವಿವಿ ಸ್ಥಾಪನೆ ಬಗ್ಗೆ ನನ್ನ ಹೃದಯಪೂರ್ವಕ ಸ್ವಾಗತವಿದೆ. ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ನಾನೆಂದೂ ಬೆರೆಸಿಲ್ಲ, ಇದು ನನ್ನ ವ್ಯಕ್ತಿತ್ವಕ್ಕೆ ಸಲ್ಲದ ನಡವಳಿಕೆ. ವಿವಿ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ದಿ ನನಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ಮಂಡ್ಯ ಜಿಲ್ಲೆ ಹಿತಕ್ಕೆ ಸಂಬಂಧಿಸಿ ಅಲ್ಲಿನ ಜನಪ್ರತಿನಿಧಿಯಾಗಿ ನನ್ನದೂ ಹೊಣೆಗಾರಿಕೆ ಇದೆ. ಈ ಬಗ್ಗೆ ನನ್ನಲ್ಲಿ ಗೊಂದಲ ಇಲ್ಲ, ಇದು ಸ್ಪಷ್ಟ. ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ ಮತ್ತು ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಕಿಡಿಕಾರಿದ್ದಾರೆ.
ನನ್ನನ್ನು ಸಂಸದನನ್ನಾಗಿ ಆಯ್ಕೆ ಮಾಡಿರುವ ಮಂಡ್ಯ ಜನತೆಗೆ ನಾನೆಂದಿಗೂ ಆಭಾರಿ. ಅದಕ್ಕೆ ತಕ್ಕಂತೆ ಕ್ಷೇತ್ರದಲ್ಲಿ ಅನುಷ್ಠಾನಗೊಳ್ಳಬೇಕಿರುವ ಕಾರ್ಯಕ್ರಮ, ಯೋಜನೆಗಳ ಬಗ್ಗೆ ಅವಿರತವಾಗಿ ಕೆಲಸ ಮಾಡುತ್ತಿದ್ದೇನೆ. ಕೇಂದ್ರ ಸಚಿವನಾಗಿ ಇಡೀ ರಾಜ್ಯದ ಮತ್ತು ಸಂಸದನಾಗಿ ಮಂಡ್ಯದ ಆಶೋತ್ತರಗಳ ಈಡೇರಿಕೆಗೆ ನಾನು ಬದ್ಧ ಅದರಲ್ಲಿ ರಾಜಿ ಪ್ರಶ್ನೆ ಇಲ್ಲ. ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ತಿಳಿಗೇಡಿಗಳು, ಅದಕ್ಕೆ ತುಪ್ಪ ಸುರಿಯುವ ಸೋಗಲಾಡಿಗಳು ಸತ್ಯ ಅರಿತುಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…