ಬೆಂಗಳೂರು: ಕೇತಗಾಹಳ್ಳಿ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನನ್ನ ವಿರುದ್ಧ ಸರ್ಕಾರಿ ಅಧಿಕಾರಿಗಳನ್ನು ದುರುಪಯೋಗ ಪಡಿಸಿಕೊಳ್ಳುವ ಮೂಲಕ ರಾಜಕಾರಣ ನಡೆಸುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಇಂದು(ಏಪ್ರಿಲ್.5) ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಸ್ಐಟಿ ತಂಡ ರಚಿಸಿ ತನಿಖೆ ಮಾಡಿಸಿದ್ದು, ಇತಿಹಾಸದಲ್ಲೇ ಮೊದಲ ಬಾರರಿಗೆ ನಡೆದಿದೆ. ನಾನು ಕೆಳಹಂತದ ಅಧಿಕಾರಿಗಳನ್ನು ಪ್ರಶ್ನಿಸುವುದಿಲ್ಲ. ಆದರೆ ಈ ವಿಚಾರದಲ್ಲಿ ನಾನು ಇಂದಿನಿಂದ ಸರ್ಕಾರದ ವಿರುದ್ಧ ನನ್ನ ಯುದ್ಧ ಪ್ರಾರಂಭಿಸುತ್ತೇನೆಂದು ಈ ನಾಡಿನ ಜನೆತೆಗೆ ಹೇಳುತ್ತಿದ್ದೇನೆ ಎಂದು ಹೇಳಿದ್ದಾರೆ.
ನನ್ನ ವಿರುದ್ಧ 70 ಎಕರೆ ಒತ್ತುವರಿ ಅತಿಕ್ರಮಣ ಮತ್ತು ಅಕ್ರಮದ ದಾಖಲೆ ಇದ್ದರೆ ಬಿಡುಗಡೆ ಮಾಡಲಿ, ನನ್ನ ಬಳಿ ಕೇವಲ 40 ಎಕರೆ ಭೂಮಿ ಮಾತ್ರ ಇರುವುದು. ಆದರೆ ಸರ್ಕಾರ ಇದನ್ನು ಪರೀಕ್ಷಿಸಲು 4-5 ಜೆಸಿಬಿ, 25 ರಿಂದ 30 ಅಧಿಕಾರಿಗಳು ಹಾಗೂ ಪೊಲೀಸರನ್ನು ಬೇರೆ ಕರೆ ತಂದು 4 ಎಕರೆ ಭೂಮಿಗಾಗಿ ತನಿಖೆ ನಡೆಸಿದ್ದಾರೆ. ಒಟ್ಟಾರೆ ಈ ಸರ್ಕಾರದವರೂ ನಾನು ಅಪರಾಧಿ ಎಂದು ಅಪಪ್ರಚಾರ ಮಾಡಲು ಹೊರಟಿದ್ದಾರೆ. ಆದರೆ ಇದೆಕ್ಕೆಲ್ಲಾ ನಾನು ಎಂದಿಗೂ ಹೆದರುವುದಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…