ಬೆಂಗಳೂರು: ಬಿಜೆಪಿ ಅವಧಿ ಸರ್ಕಾರದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಅಂಗೀಕರಿಸಿದ್ದು, ಎಸ್ಐಟಿ ರಚನೆ ಮಾಡುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು(ಏಪ್ರಿಲ್.11) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ವರದಿಯನ್ನು ಅಂಗೀಕರಿಸಲಾಯಿತು. ರಾಜ್ಯ ಗುತ್ತಿಗೆದಾರ ಸಂಘವೂ ಕಳೆದ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ 40% ಕಮಿಷನ್ ಪಡೆಯುತ್ತಿದ್ದಾರೆಂದು ಆರೋಪ ಮಾಡಿದ್ದರು. ಈ ಆರೋಪದ ಮೇಲೆ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ಸಲ್ಲಿಸಲು ಹೇಳಿತ್ತು ಎಂದರು.
ಈ ವರದಿಯನ್ನು ಕೆಲ ದಿನಗಳ ಹಿಂದೆ ನ್ಯಾಯಮೂರ್ತಿ ನಾಗಮೋಹನ ದಾಸ್ ಸಲ್ಲಿಸಿದ್ದರು. ಆದರೆ ಇಂದು ಅದನ್ನು ಸಚಿವ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಲಾಗಿದೆ. ಅಲ್ಲದೇ ಬಿಜೆಪಿ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ಪರಿಶೀಲನೆಗಾಗಿ ಎಸ್ಐಟಿ ತಂಡ ರಚಿಸಲು ತೀರ್ಮಾನ ಮಾಡಿದ್ದೇವೆ. ಜತೆಗೆ ಸಂಪುಟ ಸಭೆಯಲ್ಲಿ 21 ವಿಷಯಗಳ ಮೇಲೆ ನಿರ್ಣಯ ಕೈಗೊಂಡಿದ್ದೇವೆ ಎಂದು ಹೇಳಿದರು.
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…
ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…
ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…