ರಾಜ್ಯ

ಬಿಜೆಪಿ ಅವಧಿ ಸರ್ಕಾರದ 40% ಕಮಿಷನ್‌ ಆರೋಪ| ಎಸ್‌ಐಟಿ ರಚನೆಗೆ ತೀರ್ಮಾನ: ಎಚ್‌.ಕೆ.ಪಾಟೀಲ್‌

ಬೆಂಗಳೂರು: ಬಿಜೆಪಿ ಅವಧಿ ಸರ್ಕಾರದ 40% ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಅವರು ಸಲ್ಲಿಸಿದ ವರದಿಯನ್ನು ಅಂಗೀಕರಿಸಿದ್ದು, ಎಸ್‌ಐಟಿ ರಚನೆ ಮಾಡುವುದರ ಬಗ್ಗೆ ತೀರ್ಮಾನ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್‌.ಕೆ.ಪಾಟೀಲ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು(ಏಪ್ರಿಲ್‌.11) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ನೇತೃತ್ವದ ಸಮಿತಿ ವರದಿಯನ್ನು ಅಂಗೀಕರಿಸಲಾಯಿತು. ರಾಜ್ಯ ಗುತ್ತಿಗೆದಾರ ಸಂಘವೂ ಕಳೆದ ಬಿಜೆಪಿ ಸರ್ಕಾರ ತನ್ನ ಅವಧಿಯಲ್ಲಿ 40% ಕಮಿಷನ್ ಪಡೆಯುತ್ತಿದ್ದಾರೆಂದು ಆರೋಪ ಮಾಡಿದ್ದರು. ಈ ಆರೋಪದ ಮೇಲೆ ರಾಜ್ಯ ಸರ್ಕಾರ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್‌ ನೇತೃತ್ವದಲ್ಲಿ ಸಮಿತಿ ರಚಿಸಿ ವರದಿ ಸಲ್ಲಿಸಲು ಹೇಳಿತ್ತು ಎಂದರು.

ಈ ವರದಿಯನ್ನು ಕೆಲ ದಿನಗಳ ಹಿಂದೆ ನ್ಯಾಯಮೂರ್ತಿ ನಾಗಮೋಹನ ದಾಸ್‌ ಸಲ್ಲಿಸಿದ್ದರು. ಆದರೆ ಇಂದು ಅದನ್ನು ಸಚಿವ ಸಂಪುಟ ಸಭೆಯಲ್ಲಿ ವರದಿ ಅಂಗೀಕರಿಸಲಾಗಿದೆ. ಅಲ್ಲದೇ ಬಿಜೆಪಿ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ಪರಿಶೀಲನೆಗಾಗಿ ಎಸ್ಐಟಿ ತಂಡ ರಚಿಸಲು ತೀರ್ಮಾನ ಮಾಡಿದ್ದೇವೆ. ಜತೆಗೆ ಸಂಪುಟ ಸಭೆಯಲ್ಲಿ 21 ವಿಷಯಗಳ ಮೇಲೆ ನಿರ್ಣಯ ಕೈಗೊಂಡಿದ್ದೇವೆ ಎಂದು ಹೇಳಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

9 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

9 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

9 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

9 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

9 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

9 hours ago