ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಬಜೆಟ್ ಬಿಹಾರ ಚುನಾವಣೆಯ ಘೋಷಣಾ ಪತ್ರವಾಗಿದೆ. ಈ ಬಜೆಟ್ ದಕ್ಷಿಣ ಭಾರತದವರಿಗೆ ಅನ್ಯಾಯ ಮಾಡುವಂತಹ ಬಜೆಟ್ ಆಗಿದೆ. ಫೆಡರಲ್ ವ್ಯವಸ್ಥೆಯೊಳಗೆ ನಮ್ಮ ವಿಶ್ವಾಸ ಕಮ್ಮರುವ ರೀತಿಯಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ ಎಂದರು.
ನಾವು ರಾಜ್ಯದಿಂದ ಕೇಂದ್ರಕ್ಕೆ ಎಷ್ಟು ತೆರಿಗೆಯನ್ನು ವಿಧಿಸುತ್ತೇವೆ ಎಂಬುದು ತಿಳಿದಿದೆ. ಈ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಪಾಲು ಎಷ್ಟು? ಈ ವಿಚಾರಕ್ಕೆ ಸಂಬಂಧಿಸಿದಂತೆಯೇ ಈ ಮೊದಲು ನಾವು ವಿಧಾನಸಭೆ ಮತ್ತು ವಿಧಾನ ಪರಿಷತ್ಗಳಲ್ಲಿ ಚರ್ಚಿಸಿದ್ದರು ಸಹ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ ಬಜೆಟ್ ನಮ್ಮ ರಾಜ್ಯಕ್ಕೆ ನಿರಾಸೆಯನ್ನು ತಂದಿರುವ ಕರಾಳ ಬಜೆಟ್ ಆಗಿದೆ ಎಂದು ಹೇಳಿದರು.
ಟಿ.ನರಸೀಪುರ: ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಪುಣ್ಯಸ್ನಾನಕ್ಕೆಂದು ತ್ರಿವೇಣಿ ಸಂಗಮಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಮೈಸೂರು ಜಿಲ್ಲೆ…
ಹುಣಸೂರು: ರೈಲ್ವೆ ಹಳಿ ತಡೆಗೋಡೆಗೆ ಸಿಲುಕಿ ಕಾಡಾನೆಯೊಂದು ಕೆಲಕಾಲ ಒದ್ದಾಟ ನಡೆಸಿದ ಘಟನೆ ತಾಲ್ಲೂಕಿನ ಉಡುವೆಪುರ ಬಳಿ ನಡೆದಿದೆ. ನಾಗರಹೊಳೆ…
ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…
ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…
ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…
ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…