ಗದಗ: ಕೇಂದ್ರ ಸರ್ಕಾರ ಈ ಬಾರಿ ಮಂಡಿಸಿರುವ ಬಜೆಟ್ ಕರ್ನಾಟಕಕ್ಕೆ ತುಂಬಾ ನಿರಾಸೆಯನ್ನು ತಂದಿದೆ. ಆದರೆ ಈ ಬಗ್ಗೆ ಒಬ್ಬರಾದರೂ ಎದ್ದು ನಿಂತು ಪ್ರಶ್ನಿಸಿಲ್ಲ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಗದಗದಲ್ಲಿ ಇಂದು (ಫೆಬ್ರವರಿ.3) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಬಜೆಟ್ ಬಿಹಾರ ಚುನಾವಣೆಯ ಘೋಷಣಾ ಪತ್ರವಾಗಿದೆ. ಈ ಬಜೆಟ್ ದಕ್ಷಿಣ ಭಾರತದವರಿಗೆ ಅನ್ಯಾಯ ಮಾಡುವಂತಹ ಬಜೆಟ್ ಆಗಿದೆ. ಫೆಡರಲ್ ವ್ಯವಸ್ಥೆಯೊಳಗೆ ನಮ್ಮ ವಿಶ್ವಾಸ ಕಮ್ಮರುವ ರೀತಿಯಲ್ಲಿ ಕೇಂದ್ರ ಸರ್ಕಾರ ಬಜೆಟ್ ಮಂಡನೆ ಮಾಡಿದೆ ಎಂದರು.
ನಾವು ರಾಜ್ಯದಿಂದ ಕೇಂದ್ರಕ್ಕೆ ಎಷ್ಟು ತೆರಿಗೆಯನ್ನು ವಿಧಿಸುತ್ತೇವೆ ಎಂಬುದು ತಿಳಿದಿದೆ. ಈ ಬಜೆಟ್ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಪಾಲು ಎಷ್ಟು? ಈ ವಿಚಾರಕ್ಕೆ ಸಂಬಂಧಿಸಿದಂತೆಯೇ ಈ ಮೊದಲು ನಾವು ವಿಧಾನಸಭೆ ಮತ್ತು ವಿಧಾನ ಪರಿಷತ್ಗಳಲ್ಲಿ ಚರ್ಚಿಸಿದ್ದರು ಸಹ ಕೇಂದ್ರ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ. ಅಲ್ಲದೇ ಈ ಬಜೆಟ್ ನಮ್ಮ ರಾಜ್ಯಕ್ಕೆ ನಿರಾಸೆಯನ್ನು ತಂದಿರುವ ಕರಾಳ ಬಜೆಟ್ ಆಗಿದೆ ಎಂದು ಹೇಳಿದರು.
ದಿನೇಶ್ ಕುಮಾರ್ ಎಚ್.ಎಸ್. ಮೈಸೂರು: ಮಳೆ ಕೊರತೆಯಿಂದ ಬರ ಪರಿಸ್ಥಿತಿ ನಡುವೆಯೂ ಕೆಂಪು ಸುಂದರಿ ಟೊಮ್ಯಾಟೋ ಬೆಲೆ ಪಾತಾಳಕ್ಕಿಳಿದಿದೆ. ಕಳೆದ…
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…