ರಾಜ್ಯ

ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡವೆಂದು ಹೇಳಿದ್ದಾರೆ: ಎಚ್‌.ಎಂ.ರೇವಣ್ಣ

ನವದೆಹಲಿ: ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ಜನತೆಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಮಾಹಿತಿ ನೀಡಿದ್ದೇನೆ. ಅಲ್ಲದೇ ನಾವು ಚುನಾವಣಾ ಪೂರ್ವದಲ್ಲಿ ಸಾರ್ವಜನಿಕರಿಗೆ ಗ್ಯಾರಂಟಿ ಜಾರಿ ಮಾಡುವ ಭವಸೆ ನೀಡಿದ್ದೆವು. ಸರ್ಕಾರ ರಚನೆಯಾದ ಬಳಿಕ ಮೊದಲ ಸಂಪುಟದಲ್ಲೇ ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ. ಎಲ್ಲ ಯೋಜನೆಗಳು ಸರಿಯಾಗಿ ಅನುಷ್ಠಾನಕ್ಕೆ ಬಂದಿವೆ, ಅಲ್ಲದೇ ಗೃಹಲಕ್ಷ್ಮಿ ಯೋಜನೆ ಅಡಿ ಮೂರು ತಿಂಗಳು ಹಣ ಪಾವತಿ ಆಗಿರಲಿಲ್ಲ. ಈಗ ಅದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವವರು, ಉಳ್ಳವರು ಹಾಗೂ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಗ್ಯಾರಂಟಿ ಯೋಜನೆಗಳು ಜನತೆಯ ಆರ್ಥಿಕ ಸ್ಥಿತಿ ಹೆಚ್ಚಿಸಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಮ್ಮ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇದರ ಕುರಿತು ಯಾರು ಮಾತನಾಡಬೇಡಿ ಎಂದಿದ್ದಾರೆ. ಹೀಗಾಗಿ ಮಾತನಾಡಲ್ಲ, ಸದ್ಯ ರಾಜ್ಯ ಸರ್ಕಾರದಲ್ಲಿ ಎರಡು ಕುರ್ಚಿಗಳು ಭರ್ತಿ ಇವೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

7 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

17 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago