ರಾಜ್ಯ

ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡವೆಂದು ಹೇಳಿದ್ದಾರೆ: ಎಚ್‌.ಎಂ.ರೇವಣ್ಣ

ನವದೆಹಲಿ: ಕಾರವಾರದಲ್ಲಿ ಕೆಲವು ಮಹಿಳೆಯರು ನಮಗೆ ಗ್ಯಾರಂಟಿ ಯೋಜನೆಗಳು ಬೇಡ, ಅದು ಬಡವಿಗೆ ತಲುಪಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಸ್ವಇಚ್ಛೆಯಿಂದ ಗ್ಯಾರಂಟಿ ಬಿಟ್ಟು ಕೊಡುವ ಜನತೆಗಾಗಿ ವ್ಯವಸ್ಥೆ ಮಾಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್‌.ಎಂ.ರೇವಣ್ಣ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಇಂದು(ಮಾರ್ಚ್‌.4) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಅನುಷ್ಠಾನದ ಬಗ್ಗೆ ಕಾಂಗ್ರೆಸ್ ನಾಯಕರಾದ ಕೆ.ಸಿ.ವೇಣುಗೋಪಾಲ್, ಉಸ್ತುವಾರಿ ರಣದೀಪ್ ಸುರ್ಜೆವಾಲ ಅವರಿಗೆ ಮಾಹಿತಿ ನೀಡಿದ್ದೇನೆ. ಅಲ್ಲದೇ ನಾವು ಚುನಾವಣಾ ಪೂರ್ವದಲ್ಲಿ ಸಾರ್ವಜನಿಕರಿಗೆ ಗ್ಯಾರಂಟಿ ಜಾರಿ ಮಾಡುವ ಭವಸೆ ನೀಡಿದ್ದೆವು. ಸರ್ಕಾರ ರಚನೆಯಾದ ಬಳಿಕ ಮೊದಲ ಸಂಪುಟದಲ್ಲೇ ನಾವು ಗ್ಯಾರಂಟಿ ಜಾರಿ ಮಾಡಿದ್ದೇವೆ. ಎಲ್ಲ ಯೋಜನೆಗಳು ಸರಿಯಾಗಿ ಅನುಷ್ಠಾನಕ್ಕೆ ಬಂದಿವೆ, ಅಲ್ಲದೇ ಗೃಹಲಕ್ಷ್ಮಿ ಯೋಜನೆ ಅಡಿ ಮೂರು ತಿಂಗಳು ಹಣ ಪಾವತಿ ಆಗಿರಲಿಲ್ಲ. ಈಗ ಅದಕ್ಕೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುವವರು, ಉಳ್ಳವರು ಹಾಗೂ ಬಿಜೆಪಿ ನಾಯಕರು, ಬಡವರಿಗೆ ಬಾಯಿ ಇಲ್ಲ ಅದಕ್ಕೆ ಮಾತನಾಡಲ್ಲ ಎಂದು ಹೇಳುತ್ತಾರೆ. ಆದರೆ ನಾವು ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಈ ಗ್ಯಾರಂಟಿ ಯೋಜನೆಗಳು ಜನತೆಯ ಆರ್ಥಿಕ ಸ್ಥಿತಿ ಹೆಚ್ಚಿಸಿದೆ ಎಂದು ಆರ್ಥಿಕ ತಜ್ಞರು ಹೇಳಿದ್ದಾರೆ ಎಂದರು.

ಇದೇ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಇದರ ಬಗ್ಗೆ ನಮ್ಮ ಹೈಕಮಾಂಡ್‌ ನಿರ್ಧಾರ ಮಾಡುತ್ತದೆ. ಅಲ್ಲದೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇದರ ಕುರಿತು ಯಾರು ಮಾತನಾಡಬೇಡಿ ಎಂದಿದ್ದಾರೆ. ಹೀಗಾಗಿ ಮಾತನಾಡಲ್ಲ, ಸದ್ಯ ರಾಜ್ಯ ಸರ್ಕಾರದಲ್ಲಿ ಎರಡು ಕುರ್ಚಿಗಳು ಭರ್ತಿ ಇವೆ ಎಂದು ತಿಳಿಸಿದರು.

ಅರ್ಚನ ಎಸ್‌ ಎಸ್

Recent Posts

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

7 hours ago

ಗಾಂಧೀ ಅಭಿಯಾನ ಅರಿವಿನ ಯಾನ | ಗಾಂಧೀಜಿ ಅಹಿಂಸಾ ಮಾರ್ಗಕ್ಕೆ ಮೈಲಾರ ಮಹಾದೇವ

ದೇಶದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪ್ರಾಣತ್ಯಾಗ ಮಾಡಿದ ಮಹನೀಯರಲ್ಲಿ ಎದ್ದು ಕಾಣುವ ಹೆಸರು ಕರ್ನಾಟಕದ ಹೆಮ್ಮೆಯ ಪುತ್ರ ಮೈಲಾರ…

7 hours ago

ಗಾಂಧಿ ಅಭಿಯಾನ ಅರಿವಿನ ಯಾನ | ವಿಲಾಯತಿಗೆ ತೆರಳಲು ಅಮ್ಮ ಒಪ್ಪಿದರು

೧೮೮೭ನೇ ಇಸವಿಯಲ್ಲಿ ನಾನು ಮೆಟ್ರಿಕ್ ಪರೀಕ್ಷೆಯಲ್ಲಿ ತೇರ್ಗಡೆಯಾದೆನು. ಮೆಟ್ರಿಕ್ ಪರೀಕ್ಷೆಗೆ ಬೊಂಬಾಯಿ ಮತ್ತು ಅಹಮದಾಬಾದ್ ಎರಡೂ ಕೇಂದ್ರಗಳಾಗಿದ್ದವು. ನಾನು ಹತ್ತಿರದ…

7 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 27 ಶನಿವಾರ

10 hours ago

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

1 day ago