ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ.
ಸದ್ಯಕ್ಕೆ ಹೈಸ್ಕೂಲ್ ಮಾತ್ರ ಬಂದ್ ಮಾಡಲಾಗಿದೆ. ಮಕ್ಕಳಿಗೆ ಆನ್ಲೈನ್ ಮೂಲಕ ಕ್ಲಾಸ್ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಪ್ರೈಮರಿ ಶಾಲೆ ಸದ್ಯ ಓಪನ್ ಆಗಿದೆ. ಹಂತ ಹಂತವಾಗಿ ಶಾಲೆ ರಿ-ಓಪನ್ ಆಗಲಿದೆ. ಒಟ್ಟು 500 ಮಕ್ಕಳಿಗೆ ಶೀತ ಜ್ವರ ಬಂದಿತ್ತು. ಹೀಗಾಗಿ, ಮುಂಜಾಗ್ರತಾ ಕ್ರಮವಾಗಿ ಸ್ಯಾನಿಟೈಷನ್ ಮಾಡಿದ್ದೇವೆ. ಆತಂಕ ಬೇಡ. ಮಕ್ಕಳಿಗೆ H1N1 ಕಾಣಿಸಿಕೊಂಡಿಲ್ಲ. ಸುತ್ತಮುತ್ತ ಬೀದಿಬದಿ ಆಹಾರ ತಯಾರಿ ಮಾಡುತ್ತಾರೆ. ಸ್ವಚ್ಛತೆ ಕಾಪಾಡಿಕೊಂಡಿಲ್ಲ. ಹೀಗಾಗಿ ನಾವು ದೂರು ಕೊಟ್ಟಿದ್ದೇವೆ ಎಂದು ಶಾಲಾ ಸಿಬ್ಬಂದಿ ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಗುರುದತ್ ಹೆಗ್ಡೆ ಮಾತನಾಡಿ, ಮಕ್ಕಳಿಗೆ ಹೆಚ್1ಎನ್1 ಅನ್ನೋದು ಸುಳ್ಳು. ಇದು ಸುಳ್ಳು ಮಾಹಿತಿ. ಯಾರೂ ಇದನ್ನ ಸ್ಪ್ರೆಡ್ ಮಾಡಬೇಡಿ. ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 ಕಾಣಿಸಿಕೊಂಡಿದೆ. ಮಕ್ಕಳಿಗೆ ಕಾಣಿಸಿಕೊಂಡಿಲ್ಲ. ಪ್ಯಾನಿಕ್ ಆಗಿ ಮಕ್ಕಳು ಶಾಲೆಗೆ ಹೋಗಿಲ್ಲ. ಅಷ್ಟೇ ಯಾರು ಆತಂಕ ಪಡುವಂತಿಲ್ಲ. ಸಾರ್ವಜನಿಕವಾಗಿ ಪ್ಯಾನಿಕ್ ಆಗುತ್ತೆ ಯಾರು ಈ ಥರ ಸುದ್ದಿ ಮಾಡಬೇಡಿ. ಸಾರ್ವಜನಿಕರ ಹಿತದೃಷ್ಟಿಯಿಂದ ಪ್ಯಾನಿಕ್ ಆಗೋ ರೀತಿ ಮಾಡಬಾರದು. ಈ ಥರ ವಿಚಾರ ನಮ್ಮ ಗಮನಕ್ಕೆ ತಂದು ಸುದ್ದಿ ಮಾಡಿ. ಇದು ಸುಳ್ಳು ದಯಮಾಡಿ ಯಾರೂ ಆತಂಕ ಪಡಬೇಡಿ ಎಂದು ತಿಳಿಸಿದ್ದಾರೆ.
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿಂದು ಹನೂರು ಎನ್ಕೌಂಟರ್ ಪ್ರಕರಣ ಭಾರೀ ಚರ್ಚೆಗೆ ಕಾರಣವಾಯಿತು. ಕಲಾಪ ಆರಂಭವಾದ ತಕ್ಷಣವೇ ವಿಷಯ ಪ್ರಸ್ತಾಪಿಸಿದ ಆರ್.ಅಶೋಕ್,…
ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್ಕೌಂಟರ್ ಘಟನೆಯ…
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…