ಬೆಂಗಳೂರು: ಎಚ್ಎಎಲ್ ವಿಮಾನ ನಿಲ್ದಾಣವನ್ನು ಆದಷ್ಟು ಬೇಗ ತೆರೆಯಬೇಕು ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಬೆಂಗಳೂರು ದಕ್ಷಿಣ ಭಾಗದಲ್ಲಿ ಎರಡನೇ ವಿಮಾನ ನಿಲ್ದಾಣ ತೆರೆಯಲು ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದ್ದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಹೊಸ ಎರಡನೇ ವಿಮಾನ ನಿಲ್ದಾಣಕ್ಕಾಗಿ ನಾವು ಕಾಯುತ್ತಿರುವಾಗ ಎಚ್ಎಎಲ್ನಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ಸಾರ್ವಜನಿಕ ಮೂಲಸೌಕರ್ಯವನ್ನು ವ್ಯರ್ಥ ಮಾಡುವುದರಲ್ಲಿ ಯಾವುದೇ ಅರ್ಥವಿಲ್ಲ. ಇದರಿಂದ ಸಾವಿರಾರು ಪ್ರಯಾಣಿಕರು ಪ್ರಯೋಜನ ಪಡೆಯುತ್ತಾರೆ. ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗುವ ಸುದೀರ್ಘ ಪ್ರಯಾಣ ಇದರಿಂದ ಉಳಿತಾಯವಾಗುತ್ತದೆ ಎಂದು ಹೇಳಿದ್ದಾರೆ.
24ನೇ ವರ್ಷದ ಕ್ರಿಕೆಟ್ ಪಂದ್ಯಾವಳಿಗೆ ಬೇತ್ರಿ ಮುಕ್ಕಾಟೀರ ಕುಟುಂಬಸ್ಥರಿಂದ ಸಿದ್ದತೆ; 24 ದಿನಗಳ ಕಾಲ ಕ್ರಿಕೆಟ್ ಹಬ್ಬ ಪುನೀತ್ ಮಡಿಕೇರಿ…
ಮುರ್ಖರ ದಿನ ವಾದ ಏಪ್ರಿಲ್ ಒಂದರಂದು ( ಬುಧವಾರ), ಕೆಲವು ಜಾಲತಾಣಗಳಲ್ಲಿ ದೇಶದ ರಾಷ್ಟ್ರೀಯ ಲಾಂಛನದ ಅಡಿಯಲ್ಲಿ,(ಸಿಂಹ ಮತ್ತು ಅಶೋಕ…
ನಿ. . . ದರ್ಶನ ! ಟೇಪು ಕತ್ತರಿಸಿ, ಗುದ್ದಲಿ ಪೂಜೆ ನೆರವೇರಿಸಿ ಸರಸರನೆ ಪರದೆಯನು ಸರಿಸಿ ನೀಡುವರು ಫೋಟೋಗೆ…
ಶಾಲೆಗಳಿಗೆ ಬೇಸಿಗೆ ರಜೆ ಆರಂಭವಾಗಿರುವ ಈ ಸಂದರ್ಭದಲ್ಲಿ ಮಕ್ಕಳ ಸುರಕ್ಷತೆಯ ಬಗ್ಗೆ ಪೋಷಕರು ಹೆಚ್ಚಿನ ನಿಗಾವಹಿಸುವುದು ಅಗತ್ಯವಾಗಿದೆ. ಮಕ್ಕಳು ಬಿಸಿಲಿನಬೇಗೆಯಿಂದ…
ರೇಣುಕಾ ನಿಡುಗುಂದಿ ನಿನ್ನೆ (ಏಪ್ರಿಲ್ 2) ಹನುಮ ಜಯಂತಿ. ಒಮ್ಮೆ ಇದೇ ಹನುಮ ಜಯಂತಿಯಂದು ಯಾವುದೋ ಕಾರ್ಯಕ್ರಮಕ್ಕೆಂದು ಹೊರಟವಳು ಸರಿಯಾದ…
ಕನ್ನಡ ನಟರಿಬ್ಬರ ಸೀಮೋಲಂಘನ ನಿನ್ನೆ (ಶುಕ್ರವಾರ) ಹಿಂದಿಯಲ್ಲಿ ತಯಾರಾಗುತ್ತಿರುವ ‘ರಾಮಾಯಣ’ ಚಿತ್ರದ ಮೊದಲ ನೋಟ ಲೋಕಾರ್ಪಣೆ ಆಗಿದೆ. ಇತ್ತೀಚೆಗಷ್ಟೇ ‘ಶ್ರೀ…