ರಾಜ್ಯ

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯ ಸಮಾವೇಶ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಈ ಸಮುದಾಯವನ್ನು ಪ್ರವರ್ಗ-ಎಗೆ ಸೇರಿಸಿರುವುದು ಸರಿಯಲ್ಲ ಎನ್ನವಂತೆ ಕಾಣುತ್ತದೆ. ಪ್ರವರ್ಗ 1ಕ್ಕೆ ಸೇರಿಸುವ ಬೇಡಿಕೆ ಇದೆ. ಹೀಗಾಗಿ ವರದಿ ತರಿಸಿಕೊಂಡು ಆ ವರದಿ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ದೇಶದಲ್ಲಿ 2011ರ ಜನಗಣತಿಯೇ ಕೊನೆ ಜನಗಣತಿಯಾಗಿದ್ದು, ಸಮಾಜದಲ್ಲಿನ ವಿವಿಧ ಜಾತಿಯ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಜಾತಿ ಸಮೀಕ್ಷೆ ವರದಿಗಳು ಪ್ರಮುಖವಾಗಿವೆ. ಹೀಗಾಗಿ ನಮ್ಮ ಸರ್ಕಾರವೇ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಈಗಾಗಲೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಒದಗಿಸಿದೆ. ಹೀಗಾಗಿ ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತಾ ಅಥವಾ ಇಲ್ಲವಾ ಎನ್ನುವುದನ್ನು ಪರಶೀಲಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮನರೇಗಾ ಯೋಜನೆ ಉಳಿಸಲು ನಾಳೆ ರಾಜಭವನ ಚಲೋ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್‌ ನಾಯಕರು ನಾಳೆ ಬೃಹತ್‌ ಪ್ರತಿಭಟನೆ…

16 seconds ago

ರಾಜೀವ್‌ ಗೌಡ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ

ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತಗೆ ಬೆದರಿಕೆ ಹಾಕಿರುವ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡ ಬಂಧನ ಭೀತಿಯಿಂದ ಊರೂರು ಅಲೆಯುತ್ತಿದ್ದಾರೆ. ನಿರೀಕ್ಷಣಾ ಜಾಮೀನು…

3 mins ago

ಸಂವಿಧಾನ ರಕ್ಷಿಸಿದ್ರೆ, ದೇಶ ಸುಭದ್ರ : ಸಿಎಂ

ಬೆಂಗಳೂರು : ಸಂವಿಧಾನವನ್ನ ದುರ್ಬಲಗೊಳಿಸುವ ಪ್ರಯತ್ನ ನಡೆಸುವುದು ವಿಷ ಉಣಿಸುವ ಸಂಚು. ಸಂವಿಧಾನವನ್ನ ನಾವು ರಕ್ಷಿಸಿದ್ರೆ ಸಂವಿಧಾನ ನಮ್ಮನ್ನ ರಕ್ಷಿಸುತ್ತದೆ.…

39 mins ago

ಗಣರಾಜ್ಯೋತ್ಸವ ಸಂಭ್ರಮ | ಕರ್ತವ್ಯಪಥದಲ್ಲಿ ಸೇನಾ ಶಕ್ತಿಯ ಅನಾವರಣ

ಹೊಸದಿಲ್ಲಿ : 77ನೇ ಗಣರಾಜ್ಯೋತ್ಸವದ ಅಂಗವಾಗಿ ದಿಲ್ಲಿಯ ಕರ್ತವ್ಯ ಪಥದಲ್ಲಿ ಭಾರತವು ಸಾಂಸ್ಕೃತಿಕ ವೈವಿಧ್ಯತೆಯೊಂದಿಗೆ ದೇಶದ ಸೇನಾ ಶಕ್ತಿ ಪ್ರದರ್ಶನ…

2 hours ago

ಗಣರಾಜ್ಯ ರಕ್ಷಣೆಗೆ ಸಾಮೂಹಿಕ ಎಚ್ಚರಿಕೆಯ ಕರೆ ನೀಡಿದ ಮಮತಾ

ಕಲ್ಕತ್ತಾ : ದೇಶದ ಜನತೆಗೆ ಗಣರಾಜ್ಯೋತ್ಸವದ ಶುಭಾಶಯ ಕೋರಿರುವ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರು, ನ್ಯಾಯ, ಸ್ವಾತಂತ್ರ್ಯ,…

2 hours ago

ಕರಾವಳಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ : ಐಲ್ಯಾಂಡ್‌ಗಳನ್ನೂ ಸೇರಿಸಿಕೊಂಡು, ಸಂಪೂರ್ಣ ಕರಾವಳಿ ಭಾಗದಲ್ಲಿ ಹೊಸ ದೃಷ್ಟಿಕೋನದಿಂದ ಪ್ರವಾಸೋದ್ಯಮ ಬೆಳೆಸುವುದಕ್ಕೆ ನಾವು ಉತ್ಸುಕರಾಗಿದ್ದೇವೆ. ಇದು ಕೇವಲ…

3 hours ago