ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯ ಸಮಾವೇಶ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಈ ಸಮುದಾಯವನ್ನು ಪ್ರವರ್ಗ-ಎಗೆ ಸೇರಿಸಿರುವುದು ಸರಿಯಲ್ಲ ಎನ್ನವಂತೆ ಕಾಣುತ್ತದೆ. ಪ್ರವರ್ಗ 1ಕ್ಕೆ ಸೇರಿಸುವ ಬೇಡಿಕೆ ಇದೆ. ಹೀಗಾಗಿ ವರದಿ ತರಿಸಿಕೊಂಡು ಆ ವರದಿ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.
ದೇಶದಲ್ಲಿ 2011ರ ಜನಗಣತಿಯೇ ಕೊನೆ ಜನಗಣತಿಯಾಗಿದ್ದು, ಸಮಾಜದಲ್ಲಿನ ವಿವಿಧ ಜಾತಿಯ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಜಾತಿ ಸಮೀಕ್ಷೆ ವರದಿಗಳು ಪ್ರಮುಖವಾಗಿವೆ. ಹೀಗಾಗಿ ನಮ್ಮ ಸರ್ಕಾರವೇ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಈಗಾಗಲೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಒದಗಿಸಿದೆ. ಹೀಗಾಗಿ ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತಾ ಅಥವಾ ಇಲ್ಲವಾ ಎನ್ನುವುದನ್ನು ಪರಶೀಲಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…