ರಾಜ್ಯ

ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ

ಬೆಂಗಳೂರು: ಹಳ್ಳಿಕಾರ ಸಮುದಾಯವನ್ನು ಪ್ರವರ್ಗ 1ಕ್ಕೆ ಸೇರಿಸಬೇಕೆಂಬ ಬೇಡಿಕೆಯಿದ್ದು, ಈ ಬಗ್ಗೆ ವರದಿ ತರಿಸಿಕೊಂಡ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯ ಹಳ್ಳಿಕಾರರ ಸಂಘದ ವತಿಯಿಂದ ಆಯೋಜಿಸಿದ್ದ ಹಳ್ಳಿಕಾರ ಸಮುದಾಯ ಸಮಾವೇಶ ಮತ್ತು ವಿದ್ಯಾರ್ಥಿವೇತನ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಹಳ್ಳಿಕಾರ ಸಮುದಾಯದ ಬಗ್ಗೆ ಸಹಾನುಭೂತಿ ಇದೆ. ಈ ಸಮುದಾಯವನ್ನು ಪ್ರವರ್ಗ-ಎಗೆ ಸೇರಿಸಿರುವುದು ಸರಿಯಲ್ಲ ಎನ್ನವಂತೆ ಕಾಣುತ್ತದೆ. ಪ್ರವರ್ಗ 1ಕ್ಕೆ ಸೇರಿಸುವ ಬೇಡಿಕೆ ಇದೆ. ಹೀಗಾಗಿ ವರದಿ ತರಿಸಿಕೊಂಡು ಆ ವರದಿ ಪರಿಶೀಲಿಸಿದ ನಂತರ ಸೂಕ್ತ ನಿರ್ಧಾರ ಮಾಡಲಾಗುವುದು ಎಂದು ತಿಳಿಸಿದರು.

ದೇಶದಲ್ಲಿ 2011ರ ಜನಗಣತಿಯೇ ಕೊನೆ ಜನಗಣತಿಯಾಗಿದ್ದು, ಸಮಾಜದಲ್ಲಿನ ವಿವಿಧ ಜಾತಿಯ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿ ತಿಳಿಯಲು ಜಾತಿ ಸಮೀಕ್ಷೆ ವರದಿಗಳು ಪ್ರಮುಖವಾಗಿವೆ. ಹೀಗಾಗಿ ನಮ್ಮ ಸರ್ಕಾರವೇ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಈಗಾಗಲೇ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆರ್ಥಿಕವಾಗಿ ಹಿಂದುಳಿದವರಿಗೆ ಶೇ.10ರಷ್ಟು ಮೀಸಲಾತಿಯನ್ನು ಒದಗಿಸಿದೆ. ಹೀಗಾಗಿ ಈ ವ್ಯಾಪ್ತಿಯೊಳಗೆ ಹಳ್ಳಿಕಾರ ಸಮುದಾಯ ಬರುತ್ತಾ ಅಥವಾ ಇಲ್ಲವಾ ಎನ್ನುವುದನ್ನು ಪರಶೀಲಿಸಬೇಕಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

59 mins ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

1 hour ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

1 hour ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

1 hour ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

13 hours ago