ರಾಜ್ಯ

ಹಂಪನಾ ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ : ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು : ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.

ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ.‌ ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದರು. ಇವರ ಬದುಕು ಮತ್ತು ಬರಹ ಹಾಗೂ ಸಾರ್ಥಕತೆ ಇಡೀ ಸಮಾಜಕ್ಕೆ ಮಾರ್ಗದರ್ಶನ ಎಂದರು.

ಇದನ್ನೂ ಓದಿ:-ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ : ದುಬೈ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ಅಭಿಮತ

ಸಾಹಿತ್ಯ ಕೃಷಿಯಲ್ಲಿ ಮಾತ್ರವಲ್ಲದೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಇವರ ಕೆಲಸ ಕನ್ನಡ ಜಗತ್ತಿಗೆ ತಲುಪಿರುವುದು ಅತ್ಯಂತ ಮಹತ್ವದ ಸಂಗತಿ ಎಂದರು.

ಭಾಷಾ ಶಾಸ್ತ್ರ, ಸಂಶೋಧನೆ, ಮಕ್ಕಳ ಸಾಹಿತ್ಯ, ವಿಮರ್ಷೆ ಸೇರಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಬೆರಗು ಮೂಡಿಸುವ ಕೆಲಸ ಮಾಡಿದ್ದಾರೆ.

ಹಂಪನಾ ಅವರು ಒಳ್ಳೆ ವಾಗ್ಮಿ. ಸಮಾಜಕ್ಕೆ ಇವರಿಂದ ಬಹಳ ಉಪಕಾರ ಆಗುತ್ತದೆ. ಅಧ್ಯಾಪಕರೂ ಆಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರೂ ಆಗಿದ್ದರು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೂ ಸಾಹಿತ್ಯ ವಲಯದ ಒಡನಾಟ ಹೆಚ್ಚಾಗಿದ್ದು ನಾನು ಹಂಪನಾ ಅವರ ಅಭಿಮಾನಿ ಎಂದರು.

ಹಂಪನಾ ಅವರು ಇನ್ನೂ ನೂರು ಕಾಲ ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದರು.

ಕಮಲಾ ಮತ್ತು ಹಂಪನಾ ಅವರು ಅದ್ಭುತ ದಂಪತಿ. ಇಬ್ಬರೂ ಸಾಹಿತ್ಯ ಕೃಷಿಯಲ್ಲಿ ಸಾಧನೆ ಮಾಡಿದವರು. ಇಬ್ಬರೂ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.

ಆಂದೋಲನ ಡೆಸ್ಕ್

Recent Posts

ಅಂಗಡಿ ವ್ಯಾಪಾರಕ್ಕೆ ಅನುಮತಿ ಪಡೆದು ಬಾರ್ ಆರಂಭ!

ಎಸ್.ಎಸ್.ಭಟ್ ಮಹಿಳೆಯರು, ಮಕ್ಕಳಲ್ಲಿ ಆತಂಕ; ಬಾರ್ ಮುಚ್ಚಿಸಲು ಕಸುವಿನಹಳ್ಳಿ ಗ್ರಾಮಸ್ಥರ ಆಗ್ರಹ ನಂಜನಗೂಡು: ಮದ್ಯಪಾನ, ಧೂಮಪಾನ ರಹಿತ ವ್ಯಾಪಾರಕ್ಕೆ ಅನುಮತಿ…

4 mins ago

ಹೆಣ್ಣು ಮಗು ಮಾರಾಟ ; ಐವರ ಬಂಧನ

ಚಾಮರಾಜನಗರ : ಆರು ತಿಂಗಳ ಹೆಣ್ಣು ಮಗುವನ್ನು ಮಾರಾಟ ಮಾಡಿರುವ ಪ್ರಕರಣ ನಗರದಲ್ಲಿ ನಡೆದಿದ್ದು, ಈ ಸಂಬಂಧ ಪೋಷಕರು ಸೇರಿದಂತೆ…

11 hours ago

ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ : ಗಡಿ ಜಿಲ್ಲೆಯಲ್ಲಿ ಅಮಾನವೀಯ ಘಟನೆ

ಹನೂರು : ಜಮೀನಿನಲ್ಲಿ ಹುರುಳಿ ಫಸಲನ್ನು ಹಸು ಮೇಯ್ದಿದ್ದದನ್ನು ಪ್ರಶ್ನೆಸಿದ್ದಕ್ಕೆ ವೃದ್ಧೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ…

11 hours ago

ಹಾಸನದಲ್ಲಿ ಜಾ.ದಳ ಶಕ್ತಿ ಪ್ರದರ್ಶನ : ಚುನಾವಣೆಗೆ ತಯಾರಾಗುವಂತೆ ಕಾರ್ಯಕರ್ತರಿಕೆ ಎಚ್‌ಡಿಕೆ ಕರೆ

ಹಾಸನ : ಮುಂದಿನ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆ ನಡೆಸುವ ಸಂದೇಶವನ್ನು ರಾಜ್ಯದ ಜನರಿಗೆ ತಲುಪಿಸುವ ಗುರಿಯೊಂದಿಗೆ ನಗರದಲ್ಲಿ ಆಯೋಜಿಸಿದ್ದ…

12 hours ago

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; 10ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

ಮಳವಳ್ಳಿ : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹತ್ತುಕ್ಕೂ ಹೆಚ್ಚು ಮಂದಿ ತೀವ್ರವಾಗಿ ಗಾಯಗೊಂಡಿರುವ ಘಟನೆ ಹೊಸಹಳ್ಳಿ…

12 hours ago