ಬೆಂಗಳೂರು : ಹಂಪನಾ ಅವರು ಕೇವಲ ಸಾಹಿತ್ಯ ರಚನೆಗಾಗಿ ಸಾಹಿತಿಯಾದವರಲ್ಲ. ಸಮಾಜದಲ್ಲಿ ಬದಲಾವಣೆ ಬಯಸುವ ಸಾಹಿತಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಣ್ಣಿಸಿದರು.
ಗಾಂಧಿ ಭವನದಲ್ಲಿ ನಡೆದ “ಹಂಪನಾ 90” ಸಾಹಿತ್ಯ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಂಪನಾ ಅವರು ಸಮಾಜಮುಖಿ ಆಗುವ ಮೂಲಕ ತಮ್ಮ ಬದುಕನ್ನು ಸಾರ್ಥಕಗೊಳಿಸಿಕೊಂಡಿದ್ದಾರೆ. ಇವರು ಕನ್ನಡಿಗರ ಹೆಮ್ಮೆಯ ನಾಗರಾಜಯ್ಯ. ಇವರ ಸಾಹಿತ್ಯ ಮತ್ತು ಬದುಕಿಗೆ ನಾನು ಸಾಕ್ಷಿ ಆಗಿರುವುದು ನನ್ನ ಜೀವನದ ಸೌಭಾಗ್ಯ ಎಂದರು. ಇವರ ಬದುಕು ಮತ್ತು ಬರಹ ಹಾಗೂ ಸಾರ್ಥಕತೆ ಇಡೀ ಸಮಾಜಕ್ಕೆ ಮಾರ್ಗದರ್ಶನ ಎಂದರು.
ಇದನ್ನೂ ಓದಿ:-ವಿಷಯ ಪರಿಣಿತರಿಗೆ ವಿದೇಶದಲ್ಲಿ ವಿಪುಲ ಅವಕಾಶ : ದುಬೈ ಕಾನೂನು ಸಲಹೆಗಾರ್ತಿ ಗೀತಾಲಕ್ಷ್ಮೀ ಅಭಿಮತ
ಸಾಹಿತ್ಯ ಕೃಷಿಯಲ್ಲಿ ಮಾತ್ರವಲ್ಲದೆ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ ಆಗಿ ಕನ್ನಡ ಕಟ್ಟುವ ಕೆಲಸ ಮಾಡಿದ್ದಾರೆ. ಇವರ ಕೆಲಸ ಕನ್ನಡ ಜಗತ್ತಿಗೆ ತಲುಪಿರುವುದು ಅತ್ಯಂತ ಮಹತ್ವದ ಸಂಗತಿ ಎಂದರು.
ಭಾಷಾ ಶಾಸ್ತ್ರ, ಸಂಶೋಧನೆ, ಮಕ್ಕಳ ಸಾಹಿತ್ಯ, ವಿಮರ್ಷೆ ಸೇರಿ ಸಾಹಿತ್ಯದ ಎಲ್ಲಾ ಪ್ರಕಾರಗಳಲ್ಲಿ ಬೆರಗು ಮೂಡಿಸುವ ಕೆಲಸ ಮಾಡಿದ್ದಾರೆ.
ಹಂಪನಾ ಅವರು ಒಳ್ಳೆ ವಾಗ್ಮಿ. ಸಮಾಜಕ್ಕೆ ಇವರಿಂದ ಬಹಳ ಉಪಕಾರ ಆಗುತ್ತದೆ. ಅಧ್ಯಾಪಕರೂ ಆಗಿ, ಕನ್ನಡ ಅಧ್ಯಯನ ಕೇಂದ್ರದ ನಿರ್ದೇಶಕರೂ ಆಗಿದ್ದರು. ನಾನು ಸಾಹಿತ್ಯದ ವಿದ್ಯಾರ್ಥಿ ಅಲ್ಲ. ಆದರೂ ಸಾಹಿತ್ಯ ವಲಯದ ಒಡನಾಟ ಹೆಚ್ಚಾಗಿದ್ದು ನಾನು ಹಂಪನಾ ಅವರ ಅಭಿಮಾನಿ ಎಂದರು.
ಹಂಪನಾ ಅವರು ಇನ್ನೂ ನೂರು ಕಾಲ ಆರೋಗ್ಯವಂತರಾಗಿ ಬದುಕಲಿ ಎಂದು ಹಾರೈಸಿದರು.
ಕಮಲಾ ಮತ್ತು ಹಂಪನಾ ಅವರು ಅದ್ಭುತ ದಂಪತಿ. ಇಬ್ಬರೂ ಸಾಹಿತ್ಯ ಕೃಷಿಯಲ್ಲಿ ಸಾಧನೆ ಮಾಡಿದವರು. ಇಬ್ಬರೂ ಕನ್ನಡ ಸಾಂಸ್ಕೃತಿಕ ಲೋಕಕ್ಕೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಮೈಸೂರು: ದಕ್ಷಿಣ ಭಾರತದ ಗಾನ ಕೋಗಿಲೆ ಎಂದೇ ಹೆಸರಾದ ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು.…
ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…
ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ…