ರಾಜ್ಯ

ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಿ: ಆರ್‌.ಅಶೋಕ ಆಗ್ರಹ

ಕಾಂಗ್ರೆಸ್‌ ಸರ್ಕಾರದ ತುಷ್ಟೀಕರಣ ರಾಜಕಾರಣ: ವಿಪಕ್ಷ ನಾಯಕ

ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್‌ ಬಾಂಬ್‌ ಎಲ್ಲಿಂದ ತಂದಿದ್ದಾರೆ, ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲ ಪ್ರಕರಣಗಳನ್ನು ಎನ್‌ಐಎ ಗೆ ವಹಿಸಬೇಕು ಎಂದರು.

ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದು, ಇದು ಕಾಂಗ್ರೆಸ್‌ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್‌ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್‌ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದರು.

ರಾಹುಲ್‌ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್‌, ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇವರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ.‌ ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಕ್ಷಣ ಬಂಧನ ಏಕೆ?

ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್‌ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೆ ಎಲ್ಲ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೆ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು.

ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು.

ಅಧಿಕಾರದ ದುರಾಸೆಗೆ ಕೇಜ್ರಿವಾಲ್‌ ರಾಜಕೀಯಕ್ಕೆ

ಅರವಿಂದ ಕೇಜ್ರಿವಾಲ್‌ ನಾಟಕದ ಕಂಪನಿ ನಡೆಸುತ್ತಿದ್ದಾರೆ. ಇವರು ಅಪರಾಧಿ ಎಂದು ಸಾಬೀತಾಗುವ ಮೊದಲೇ ರಾಜೀನಾಮೆ ಕೊಡುವ ನಾಟಕವಾಡುತ್ತಿದ್ದಾರೆ. ಅಧಿಕಾರದ ದುರಾಸೆಗಾಗಿ ಅವರು ರಾಜಕೀಯಕ್ಕೆ ಬಂದಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಇಂದಿನಿಂದ ಮೂರು ದಿನ ಸಿಇಟಿ ಪರೀಕ್ಷೆ

ಮೈಸೂರು : ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ 2026ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಗಳು ಬುಧವಾರದಿಂದ…

5 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 22 ಬುಧವಾರ

30 mins ago

ಹಾಸನ: ಸಿಡಿಲು ಬಡಿದು ಮಹಿಳೆ ಸಾವು

ಹಾಸನ: ಸಿಡಿಲು ಬಡಿದು ಮಹಿಳೆ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಆಲೂರು ತಾಲ್ಲೂಕಿನಲ್ಲಿ ನಡೆದಿದೆ. ನೀಲಮ್ಮ ಎಂಬುವವರೇ ಸಿಡಿಲು ಬಡಿದು ಸಾವನ್ನಪ್ಪಿರುವ…

12 hours ago

ಪಹಲ್ಗಾಮ್‌ ದಾಳಿಯಾಗಿ ನಾಳೆಗೆ 1 ವರ್ಷ: ಸೇನೆಯಿಂದ ಪೋಸ್ಟ್‌

ನವದೆಹಲಿ: ಬೈಸರನ್‌ ವ್ಯಾಲಿಗೆ ಪ್ರವಾಸಕ್ಕೆಂದು ಹೋಗಿದ್ದಾಗ 26 ಜನರು ಸಾವನ್ನಪ್ಪಿದ್ದ ಭಯೋತ್ಪಾದಕ ದಾಳಿಗೆ ನಾಳೆ ಒಂದು ವರ್ಷ. ಭಾರತೀಯ ಸೇನೆ…

12 hours ago

ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ: ಸಿಎಂ ಸಿದ್ದರಾಮಯ್ಯ

ಪಿರಿಯಾಪಟ್ಟಣ: ಬಿಜೆಪಿಯ ಅಪಪ್ರಚಾರಕ್ಕೆ ಅಭಿವೃದ್ದಿ ಕಾರ್ಯಗಳ ಮೂಲಕವೇ ಉತ್ತರ ನೀಡುತ್ತಿದ್ದೇವೆ. ನಮ್ಮ ಅಭಿವೃದ್ಧಿ ಕಾರ್ಯಗಳು ಜನರಿಗೆ ಮುಟ್ಟಿವೆ. ಜನ ನಮ್ಮ…

12 hours ago

ಪಾಲಹಳ್ಳಿ ಬೇಸಿಗೆ ಶಿಬಿರದಲ್ಲಿ ಮಕ್ಕಳೊಂದಿಗೆ ಸಂವಾದ ನಡೆಸಿದ ಸಚಿವ ಚಲುವರಾಯಸ್ವಾಮಿ

​ಶ್ರೀರಂಗಪಟ್ಟಣ: ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಅತ್ಯುತ್ತಮ ವೇದಿಕೆಯಾಗಿದ್ದು, ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವುದು ಮಕ್ಕಳ ವ್ಯಕ್ತಿತ್ವ…

13 hours ago