ಬೆಂಗಳೂರು: ಮೈಸೂರು ಮುಡಾ ಹಗರಣವನ್ನು ಸಿಬಿಐಗೆ ವಹಿಸಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾದಲ್ಲಿ ಕೇವಲ 14 ಸೈಟ್ಗಳಷ್ಟೇ ಅಲ್ಲ. ಬಡವರ ಸೈಟ್ ಕೂಡ ಲೂಟಿಯಾಗಿದೆ. ಮುಡಾದಲ್ಲಿ ಎರಡರಿಂದ ನಾಲ್ಕು ಸಾವಿರ ಕೋಟಿ ಅಕ್ರಮ ಆಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ ಎಂದು ಆರೋಪಿಸಿದರು.
ಇನ್ನು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿಗಳು ದಾಖಲೆಗಳಿಗೆ ವೈಟ್ನರ್ ಹಾಕುತ್ತಾರೆ. ಬಳಿಕ ದಾಖಲೆಗಳನ್ನೇ ಮಾಯ ಮಾಡುತ್ತಾರೆ. ಹೀಗಾಗಿ ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕು. ಆಗ ಮಾತ್ರ ಮತ್ತಷ್ಟು ಹಗರಣ ಹೊರಬರುತ್ತದೆ. ಐಎಎಸ್ ಅಧಿಕಾರಿ ಫೈಲ್ ತೆಗೆದುಕೊಂಡು ಹೋಗಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ. ಸಚಿವ ಭೈರತಿ ಸುರೇಶ್ ಕೂಡ ಎಷ್ಟು ಫೈಲ್ ತೆಗೆದುಕೊಂಡು ಹೋಗಿದ್ದಾರೋ ಆ ಬಗ್ಗೆ ಇಲ್ಲಿಯವರೆಗೂ ಮಾಹಿತಿಯೇ ದೊರೆತಿಲ್ಲ ಎಂದು ಕಿಡಿಕಾರಿದರು.
ಇನ್ನು ಮುಡಾ ಅಕ್ರಮ ರಕ್ಷಣೆಗೆ ಕೆಲ ಅಧಿಕಾರಿಗಳು ಮುಂದಾಗಿರುವುದು ಸರಿಯಾದ ಬೆಳವಣಿಗೆ ಅಲ್ಲ. ಈ ಪ್ರಕರಣವನ್ನು ಸಿಬಿಐಗೆ ಕೊಡಬೇಕು. ಆಗ ಮಾತ್ರ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ ಎಂದು ಆಗ್ರಹಿಸಿದರು.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…