ರಾಜ್ಯ

ಆನೆಗಳ ಹಸ್ತಾಂತರ : ಮೇ.21 ರಂದು ಪವನ್ ಕಲ್ಯಾಣ್ ಗೆ ಕುಮ್ಕಿ ಆನೆ ಹಸ್ತಾಂತರಿಸಲಿರುವ ಸಿಎಂ, ಡಿಸಿಎಂ

ಬೆಂಗಳೂರು : ನೆರೆಯ ಆಂಧ್ರಪ್ರದೇಶಕ್ಕೆ ಮೇ 21 ರಂದು ಕುಮ್ಕಿ ಆನೆಗಳನ್ನು ಹಸ್ತಾಂತರಿಸಲಾಗುತ್ತಿದ್ದು, ಇದು ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸುವುದರ ಜೊತೆಗೆ, ಕರ್ನಾಟಕ ಗಡಿ ಮತ್ತು ಆಂಧ್ರದ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ವಿಧ್ಯುಕ್ತ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಪಳಗಿಸಿದ ಆನೆಗಳನ್ನು ಹಸ್ತಾಂತರ ಮಾಡುವರು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ಆಗಸ್ಟ್ ನಲ್ಲಿ ಬೆಂಗಳೂರಿನಲ್ಲಿ ನಡೆದ ಆನೆ-ಮಾನವ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ವೇಳೆ ಕರ್ನಾಟಕ- ಆಂಧ್ರಪ್ರದೇಶ, ತೆಲಂಗಾಣ ಹಾಗೂ ಕೇರಳ ರಾಜ್ಯಗಳ ನಡುವೆ ಆಗಿರುವ ಉತ್ತಮ ರೂಢಿಗಳ ವಿನಿಮಯ ಒಪ್ಪಂದದ ಭಾಗವಾಗಿ ಈ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಾಗುತ್ತಿದೆ ಎಂದೂ ಖಂಡ್ರೆ ತಿಳಿಸಿದ್ದಾರೆ.

ಕಳೆದ ವರ್ಷ ಆಗಸ್ಟ್ 8ರಂದು ಪವನ್ ಕಲ್ಯಾಣ್ ಅವರು ಬೆಂಗಳೂರಿಗೆ ಆಗಮಿಸಿ ತಮ್ಮನ್ನು ಭೇಟಿ ಮಾಡಿ ಆಂಧ್ರದಲ್ಲಿ ಹೆಚ್ಚುತ್ತಿರುವ ಪುಂಡಾನೆಗಳ ಸೆರೆಗೆ ಕುಮ್ಕಿ ಆನೆ ನೀಡುವಂತೆ ಮತ್ತು ತಮ್ಮ ರಾಜ್ಯದ ಮಾವುತರು ಮತ್ತು ಅರಣ್ಯ ಸಿಬ್ಬಂದಿಗೆ ಆನೆ ಸೆರೆ ಕಾರ್ಯಾಚರಣೆಯ ತರಬೇತಿ ನೀಡುವಂತೆ ಮನವಿ ಮಾಡಿದ್ದರು. ಸೆಪ್ಟೆಂಬರ್ 27ರಂದು ತಮ್ಮ ನೇತೃತ್ವದ ನಿಯೋಗ ವಿಜಯವಾಡಕ್ಕೆ ಭೇಟಿ ನೀಡಿದ್ದ ವೇಳೆ ಈ ಸಂಬಂಧ ಎರಡೂ ರಾಜ್ಯಗಳ ನಡುವೆ ತಿಳಿವಳಿಕೆ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಮೇ 21ರಂದು ಈ ಆನೆಗಳನ್ನು ಹಸ್ತಾಂತರ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಗಡಿ ಜಿಲ್ಲೆ ಆನೆ ಸಮಸ್ಯೆಗೂ ಪರಿಹಾರ: ಆಂಧ್ರಪ್ರದೇಶದ ಚಿತ್ತೂರು ಗಡಿಗೆ ಹೊಂದಿಕೊಂಡಿರುವ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದ್ದು, ನೆರೆಯ ಆಂಧ್ರಪ್ರದೇಶದಿಂದ ನಮ್ಮ ರಾಜ್ಯಕ್ಕೆ ಪುಂಡಾನೆಗಳು ಬಾರದಂತೆ ತಡೆಯಲೂ ಆಂಧ್ರ ನಡೆಸಲಿರುವ ಆನೆ ಸೆರೆ ಕಾರ್ಯಾಚರಣೆ ಮುಂದಿನ ದಿನಗಳಲ್ಲಿ ನೆರವಾಗಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಪರೋಕ್ಷವಾಗಿ ಲಾಭವಾಗಲಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ದಸರಾ ಆನೆ ಹಸ್ತಾಂತರ ಇಲ್ಲ:
ಕರ್ನಾಟಕದ ಹೆಮ್ಮೆಯ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡಿರುವ ಅಥವಾ ದಸರಾ ಮಹೋತ್ಸವಕ್ಕಾಗಿ ಈಗಾಗಲೇ ಗುರುತಿಸಲಾಗಿರುವ ಯಾವುದೇ ಕುಮ್ಕಿ ಆನೆಯನ್ನು ಆಂಧ್ರಪ್ರದೇಶಕ್ಕೆ ನೀಡಲಾಗುತ್ತಿಲ್ಲ ಎಂದೂ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಹಾರ | ಸಂಪುಟ ಸೇರಿದ ನಿತೀಶ್‌ ಪುತ್ರ ನಿಶಾಂತ್‌ ; ಸಚಿವರಾಗಿ 32 ಮಂದಿ ಪ್ರಮಾಣ

ಪಾಟ್ನಾ : ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ನೇತೃತ್ವದ ಬಿಜೆಪಿ-ಎನ್‌ಡಿಎ ಸರ್ಕಾರವು ನೂತನ ಸಂಪುಟ ವಿಸ್ತರಿಸಿದ್ದು, 31 ಎನ್‌ಡಿಎ ನಾಯಕರು ಸಚಿವರಾಗಿ…

27 seconds ago

ಬೆಂಗಳೂರು : ನೈರುತ್ಯ ರೈಲ್ವೆ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಮತ್ತೆ ಕಡೆಗಣಿಸಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ…

1 hour ago

ಚುನಾವಣಾ ರಾಜಕಾರಣಕ್ಕೆ ಎಚ್.ವಿಶ್ವನಾಥ್‌ ವಿದಾಯ

ಮೈಸೂರು : 50 ಕೋಟಿ ಖರ್ಚು ಮಾಡಿ ಇಂದಿನ ಚುನಾವಣೆ ಎದುರಿಸುವಷ್ಟು ಶಕ್ತಿ ನನ್ನಲ್ಲಿ ಇಲ್ಲ. ಹೀಗಾಗಿ ಮುಂದೆ ಯಾವ…

2 hours ago

ಯೋಗೇಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್‌ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…

3 hours ago

ರಾಮಚಂದ್ರರಾವ್‌ ಮೇಲಿನ ಅಮಾನತು ಆದೇಶ ರದ್ದು: ಎಚ್.ವಿಶ್ವನಾಥ್‌ ಆಕ್ಷೇಪ

ಮೈಸೂರು: ಹಿರಿಯ ಪೊಲೀಸ್‌ ಅಧಿಕಾರಿ ರಾಮಚಂದ್ರರಾವ್‌ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್‌ ಎಚ್.ವಿಶ್ವನಾಥ್‌…

4 hours ago

ಮತ್ತೆ ರಾಜ್ಯಪಾಲರನ್ನು ಭೇಟಿಯಾದ ವಿಜಯ್:‌ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸಿ ಎಂದ ಗವರ್ನರ್‌

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್‌ ಅವರ ಟಿವಿಕೆ ಪಕ್ಷ…

5 hours ago