ಹನೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಾಳೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಇದಕ್ಕಾಗಿ ಬೆಟ್ಟದಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಸಚಿವ ಸಂಪುಟ ನಡೆಯಲಿರುವ ಹಿನ್ನೆಲೆಯಲ್ಲಿ ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಝುಗಮಗಿಸುತ್ತಿದ್ದು, ಜಿಲ್ಲಾಡಳಿತ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಅಚ್ಚುಕಟ್ಟಾಗಿ ತಮ್ಮ ಜವಾಬ್ದಾರಿ ನಿರ್ವಹಿಸಿದ್ದಾರೆ.
ನಾಳೆ ಮಹದೇಶ್ವರ ಬೆಟ್ಟದಲ್ಲಿ ಪೂರ್ಣ ಪ್ರಮಾಣದ ಸಚಿವ ಸಂಪುಟ ನಡೆಯುತ್ತಿದ್ದು, ಚಾಮರಾಜನಗರ ಜಿಲ್ಲೆಗೆ ವಿಶೇಷ ಪ್ಯಾಕೇಜ್ ಘೋಷಣೆಯಾಗುವ ನಿರೀಕ್ಷೆಯಿದೆ.
ಇನ್ನು ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಐತಿಹಾಸಿಕ ಸಚಿವ ಸಂಪುಟ ಸಭೆ ನಡೆಯುತ್ತಿರುವುದರಿಂದ ಸಾಲೂರು ಬೃಹನ್ ಮಠದ ಎಸ್ ಬಿ ಐ ಸರ್ಕಲ್ ನಲ್ಲಿ ರಾಜಗೋಪುರ ಮಾದರಿ, ವಜ್ರಮಲೈ ವಸತಿಗೃಹದ ಮುಂಭಾಗ ಸ್ವಾಗತ ಕಮಾನು, ಆನೆ ತಲೆ ದಿಂಬ ಸಚಿವ ಸಂಪುಟ ಸಭೆ 108 ಅಡಿ ಮಲೆ ಮಹದೇಶ್ವರ ಪ್ರತಿಮೆ ಸ್ಥಳಗಳಲ್ಲಿ ವಿಶೇಷ ವಿನೂತನ ಮಾದರಿಯಲ್ಲಿ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ತನ್ನದೇ ಆದ ಇತಿಹಾಸ ಹೊಂದಿರುವ ಗೋಪುರಗಳ ಮಾದರಿಯಲ್ಲಿ ವಿದ್ಯುತ್ ದೀಪ ಅಲಂಕಾರ ಮಾಡಲಾಗಿದೆ.
ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…
ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…
ಬೆಂಗಳೂರು : ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಧೈವಾರ್ಷಿಕ ಚುನಾವಣೆಯಲ್ಲಿ ನಿರೀಕ್ಷೆಯಂತೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಗಳಾದ ಎಂ.ಮಲ್ಲಿಕಾರ್ಜುನ…
ಕರ್ನಾಟಕ ಸಿಎಂ ಡಿಕೆಶಿ ಸೇರಿ ಹಲವು ರಾಜ್ಯಗಳ ಸಿಎಂಗಳು ಭಾಗಿ ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ರಾಷ್ಟ್ರ…
ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಚಿವ ಸ್ಥಾನಕ್ಕಾಗಿ ಪಕ್ಷದ…
ಕೋಯಿಕ್ಕೋಡ್: ವಯನಾಡು, ಕೋಯಿಕ್ಕೋಡ್ನಲ್ಲಿ ಶಿಗೆಲ್ಲಾ ವೈರಸ್ ಸೋಂಕು ಹರಡಿರುವ ನಡುವೆ ನಿಫಾ ವೈರಸ್ ಪತ್ತೆಯಾಗಿದೆ. 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ…