ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್ ಸಿದ್ಧವಾಗಿದ್ದು, ಗುರುವಾರ(ಜ.30) ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಈ ವಿಚಾರವಾಗಿ ಕ್ಯಾಬಿನೆಟ್ ಅಜೆಂಡಾದಲ್ಲಿ ಸುಗ್ರೀವಾಜ್ಞೆ ವಿಷಯ ಸೇರ್ಪಡೆ ಮಾಡಿದ್ದು, ಕಾನೂನು ಇಲಾಖೆಯಿಂದ ಕರ್ನಾಟಕ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಹಣ ಹಾಗೂ ಲೇವಾದೇವಿ ನಿಯಂತ್ರಣ 2025ರ ಕರಡು ಬಿಲ್ ಸಿದ್ಧಪಡಿಸಿಕೊಂಡಿದೆ. ಅಲ್ಲದೇ ಈ ಬಿಲ್ ವಿಚಾರವಾಗಿ ಸಚಿವ ಸಂಪುಟ ಸಭೆಯಲ್ಲಿ ಮೊದಲ ಆದ್ಯತೆ ನೀಡಿ, ಸುಗ್ರೀವಾಜ್ಞೆ ಕೈಗೆತ್ತಿಕೊಳ್ಳಲು ನಿರ್ಧಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾರ್ವಜನಿಕರಿಗೆ ಕಿರುಕುಳ ನೀಡಿದರೆ ಅಂತಹ ಕಂಪೆನಿಗಳ ವಿರುದ್ಧ 3 ವರ್ಷ ಜೈಲು, 1ಲಕ್ಷ ರೂ.ವರೆಗೆ ದಂಡ ವಿಧಿಸಲು ಕರುಡು ಬಿಲ್ನಲ್ಲಿ ಕಾನೂನು ರಚಿಸಲಾಗಿದೆ. ಅಲ್ಲದೇ ನೋಂದಣಿ ಪ್ರಾಧಿಕಾರದ ಮೂಲಕ ಮೈಕ್ರೋ ಫೈನಾನ್ಸ್ಗಳಿಗೆ ಕಡ್ಡಾಯ ನೋಂದಣಿ ನಿಯಮಗಳನ್ನು ಜಾರಿಗೊಳಿಸುತ್ತಿದೆ. ಜೊತೆಗೆ ಆರ್ಬಿಐ ನಿಯಮಗಳ ಅನ್ವಯ ಸಾಲಮಿತಿ, ಬಡ್ಡಿ ಮಿತಿಗಳನ್ನ ಪಾಲಿಸಬೇಕೆಂಬ ಷರತ್ತು ಸುಗ್ರೀವಾಜ್ಞೆಯಲ್ಲಿ ಇದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಾಲ ವಸೂಲಾತಿಗೂ ಕಠಿಣ ಷರತ್ತುಗಳನ್ನು ಹಾಕಲಾಗತ್ತಿದ್ದು, ಕಿರುಕುಳ ನೀಡಿದ ಫೈನಾನ್ಸ್ ಕಂಪೆನಿಗಳ ವಿರುದ್ಧ ಮುಲಾಜಿಲ್ಲದೇ ಈ ಕ್ರಮಗಳನ್ನು ಸುಗ್ರೀವಾಜ್ಞೆ ಮೂಲಕ ತರಲಾಗುತ್ತಿದೆ. ಹೀಗಾಗಿ ಜ.30, ಗುರುವಾರ ಸುಗ್ರೀವಾಜ್ಞೆ ಜಾರಿಗೊಳಿಸುತ್ತಿದ್ದು, ಕರಡು ಬಿಲ್ ಕುರಿತು ಚರ್ಚಿಸಿ ಆ ನಂತರ ಕೆಲ ಸಣ್ಣಪುಟ್ಟ ಮಾರ್ಪಾಡುಗಳನ್ನು ಮಾಡುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…