ರಾಜ್ಯ

ಅರಣ್ಯಾಧಿಕಾರಿಗಳಿಂದ ಚಿನ್ನದಂಗಡಿ ಮಾಲೀಕರ ಮೇಲೆ ದೌರ್ಜನ್ಯ : ಟಿ.ಎ. ಶರವಣ ಆಕ್ರೋಶ

ಬೆಂಗಳೂರು : ಹುಲಿ ಉಗುರು ವಿಚಾರವಾಗಿ ರಾಜ್ಯದ ಚಿನ್ನದ ಅಂಗಡಿಗಳ ಮಾಲೀಕರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿನ್ನದ ಅಂಗಡಿ ಮಾಲೀಕರಾದ ಟಿ.ಎ. ಶರವಣ ಆರೋಪ ಮಾಡಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲಿ ಉಗುರು ವಿಚಾರವಾಗಿ ಚಿನ್ನದ ಅಂಗಡಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಾ ಇದ್ದಾರೆ. ನೋಟಿಸ್ ಕೊಡದೆ, ತಪಾಸಣೆ ನಡೆಸದೆ ವರ್ತೂರು ಸಂತೋಷ್ ಅವರನ್ನು ಅರೆಸ್ಟ್ ಮಾಡಿದ್ದು ಸರಿಯಲ್ಲ. ರಾಜ್ಯದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಿವೆ, ಅದರ ಪರಿಹಾರಕ್ಕೆ ಸರ್ಕಾರ ಗಮನ ಹರಿಸೋಕೆ ಆಗ್ತಿಲ್ವ ಎಂದು ವಾಗ್ದಾಳಿ ನಡೆಸಿದರು.

ಯಾವ ವಿಚಾರವನ್ನು ಮುಚ್ಚಿಡೋಕ್ಕೆ ಹುಲಿ ಉಗುರು ವಿಷಯವನ್ನು ಹೈಲೈಟ್ ಮಾಡ್ತಾ ಇದ್ದೀರಾ? ಅಸಲಿ ಹುಲಿ ಉಗುರು ಧರಿಸೋ ಶಕ್ತಿ ಯಾರಿಗೂ ಇಲ್ಲ. ಹಸುವಿನ ಕೊಂಬು ಹಾಗೂ ಸಿಂತೆಟಿಕ್ ವಸ್ತುವಿನಿಂದ ಅಕ್ಕಸಾಲಿಗರಿಂದ ಮಾಡಿಸಿರೋದು. ಹುಲಿ ಉಗುರು ಅಷ್ಟೇನಾ, ಆನೆ ಕೂದಲೂ ಕಾಣಲ್ವಾ? ಆನೇ ಕೂದಲು, ಹುಲಿ ಉಂಗುರು ಎಂದು ನಾವು ಮಾರುತ್ತಿರುವುದು ಕಪ್ಪು ಪ್ಲಾಸ್ಟಿಕ್ ಪೈಪ್ ಪ್ರಾಣಿಗಳ ಬಗ್ಗೆ ಅಷ್ಟೊಂದು ಕಾಳಜಿ ಇದ್ರೆ ಮೊದಲು ಜನರಲ್ಲಿ ಜಾಗೃತಿ ಮೂಡಿಸಿ ಎಂದರು.

ಅರ್ಚಕರು, ರಾಜಕೀಯ ವ್ಯಕ್ತಿಗಳು, ಸಿನಿ ತಾರೆಯರ ಮೇಲೆ ದಾಳಿ ಮಾಡೋದು ಬಿಡಿ. ನಿಜ್ವಾಗ್ಲೂ ಯಾರ ಬಳಿ ಇದೆ ಅಂಥವರಿಗೆ ವಾಪಾಸ್ ಕೊಡೋಕೆ 2 ತಿಂಗಳು ಟೈಮ್ ಕೊಡಿ. ಅದನ್ನು ಬಿಟ್ಟು ಒಡವೆ ಅಂಗಡಿಗಳ ಮೇಲೆ ದಾಳಿ ಮಾಡಿ, ದಬ್ಬಾಳಿಕೆ ಮಾಡೋದು ಸರಿಯಲ್ಲ. ಹೀಗೆ ಮುಂದುವರಿದರೆ ನಾವು ಪ್ರತಿಭಟನೆಗೆ ಮುಂದಾಗ್ತಿವಿ ಎಂದು ಶರವಣ ಎಚ್ಚರಿಕೆ ನೀಡಿದರು.

ತುಮಕೂರಿನ ವಿಶ್ವಾಸ ಜ್ಯುಯಲರ್ಸ್ ಮೇಲೆ ನಿನ್ನೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲಿ ಮಾಲೀಕ ಇಲ್ಲದ ಕಾರಣಕ್ಕೆ, ಅವರ ಮನೆಗೆ ಕಳ್ಳನ ರೀತಿ ಹುಡುಕಿಕೊಂಡು ಹೋಗಿದ್ದಾರೆ. ನೋಟಿಸ್ ಕೊಟ್ಟು ತಪಾಸಣೆ ಬನ್ನಿ, ಬೇಡ ಅನ್ನಲ್ಲ. ಸರ್ಕಾರ ನೆಡೆಸುವ ಮಂತ್ರಿಗಳು ಮೊದಲು ಸರಿ ಇದ್ದಾರಾ ನೋಡಿಕೊಳ್ಳಿ. ಚಿಕ್ಕವರಿಗೆ ಒಂದು ನ್ಯಾಯ, ದೊಡ್ಡವರಿಗೆ ಮತ್ತೊಂದು ನ್ಯಾಯಾನಾ? ಕುಮಾರಸ್ವಾಮಿಯವರ ಮನೆಯಲ್ಲಿ ಇದ್ದ ಲಾಕೆಟ್ ನಕಲಿ. ಅದನ್ನು ನಾನೇ ಪರಿಶೀಲಿಸಿ ಅಧಿಕಾರಿಗಳಿಗೆ ಒಪ್ಪಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

lokesh

Recent Posts

ರಾಮನಗರದ ರೈಲ್ವೆ ಪ್ರಯಾಣಿಕರಿಗೆ ಶುಭ ಸಮಾಚಾರ: ಏನದು ಗೊತ್ತಾ.?

ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್‌ ಎಕ್ಸ್‌ಪ್ರೆಸ್‌ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…

11 hours ago

ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್‌ ಆಯ್ಕೆ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…

12 hours ago

ತಮಿಳುನಾಡು ಫಲಿತಾಂಶ ತುಂಬಾ ಆಶ್ವರ್ಯಕರವಾಗಿದೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…

12 hours ago

ತಮಿಳುನಾಡು ಸಿಎಂ ಎಂ ಕೆ ಸ್ಟಾಲಿನ್‌ ರಾಜೀನಾಮೆ

ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್‌ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…

13 hours ago

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಯುವಕನ ಕೊಲೆ

ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್‌ ಠಾಣೆಯಿಂದ ಕೇವಲ…

13 hours ago

ಹನೂರು: ಪಂಪ್‌ಸೆಟ್‌ ಮೋಟಾರ್‌ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್‌ಗಳನ್ನು…

14 hours ago