ರಾಜ್ಯ

ಅರಣ್ಯಾಧಿಕಾರಿಗಳಿಂದ ಚಿನ್ನದಂಗಡಿ ಮಾಲೀಕರ ಮೇಲೆ ದೌರ್ಜನ್ಯ : ಟಿ.ಎ. ಶರವಣ ಆಕ್ರೋಶ

ಬೆಂಗಳೂರು : ಹುಲಿ ಉಗುರು ವಿಚಾರವಾಗಿ ರಾಜ್ಯದ ಚಿನ್ನದ ಅಂಗಡಿಗಳ ಮಾಲೀಕರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿನ್ನದ ಅಂಗಡಿ ಮಾಲೀಕರಾದ ಟಿ.ಎ. ಶರವಣ ಆರೋಪ ಮಾಡಿದರು.

ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲಿ ಉಗುರು ವಿಚಾರವಾಗಿ ಚಿನ್ನದ ಅಂಗಡಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಾ ಇದ್ದಾರೆ. ನೋಟಿಸ್ ಕೊಡದೆ, ತಪಾಸಣೆ ನಡೆಸದೆ ವರ್ತೂರು ಸಂತೋಷ್ ಅವರನ್ನು ಅರೆಸ್ಟ್ ಮಾಡಿದ್ದು ಸರಿಯಲ್ಲ. ರಾಜ್ಯದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಿವೆ, ಅದರ ಪರಿಹಾರಕ್ಕೆ ಸರ್ಕಾರ ಗಮನ ಹರಿಸೋಕೆ ಆಗ್ತಿಲ್ವ ಎಂದು ವಾಗ್ದಾಳಿ ನಡೆಸಿದರು.

ಯಾವ ವಿಚಾರವನ್ನು ಮುಚ್ಚಿಡೋಕ್ಕೆ ಹುಲಿ ಉಗುರು ವಿಷಯವನ್ನು ಹೈಲೈಟ್ ಮಾಡ್ತಾ ಇದ್ದೀರಾ? ಅಸಲಿ ಹುಲಿ ಉಗುರು ಧರಿಸೋ ಶಕ್ತಿ ಯಾರಿಗೂ ಇಲ್ಲ. ಹಸುವಿನ ಕೊಂಬು ಹಾಗೂ ಸಿಂತೆಟಿಕ್ ವಸ್ತುವಿನಿಂದ ಅಕ್ಕಸಾಲಿಗರಿಂದ ಮಾಡಿಸಿರೋದು. ಹುಲಿ ಉಗುರು ಅಷ್ಟೇನಾ, ಆನೆ ಕೂದಲೂ ಕಾಣಲ್ವಾ? ಆನೇ ಕೂದಲು, ಹುಲಿ ಉಂಗುರು ಎಂದು ನಾವು ಮಾರುತ್ತಿರುವುದು ಕಪ್ಪು ಪ್ಲಾಸ್ಟಿಕ್ ಪೈಪ್ ಪ್ರಾಣಿಗಳ ಬಗ್ಗೆ ಅಷ್ಟೊಂದು ಕಾಳಜಿ ಇದ್ರೆ ಮೊದಲು ಜನರಲ್ಲಿ ಜಾಗೃತಿ ಮೂಡಿಸಿ ಎಂದರು.

ಅರ್ಚಕರು, ರಾಜಕೀಯ ವ್ಯಕ್ತಿಗಳು, ಸಿನಿ ತಾರೆಯರ ಮೇಲೆ ದಾಳಿ ಮಾಡೋದು ಬಿಡಿ. ನಿಜ್ವಾಗ್ಲೂ ಯಾರ ಬಳಿ ಇದೆ ಅಂಥವರಿಗೆ ವಾಪಾಸ್ ಕೊಡೋಕೆ 2 ತಿಂಗಳು ಟೈಮ್ ಕೊಡಿ. ಅದನ್ನು ಬಿಟ್ಟು ಒಡವೆ ಅಂಗಡಿಗಳ ಮೇಲೆ ದಾಳಿ ಮಾಡಿ, ದಬ್ಬಾಳಿಕೆ ಮಾಡೋದು ಸರಿಯಲ್ಲ. ಹೀಗೆ ಮುಂದುವರಿದರೆ ನಾವು ಪ್ರತಿಭಟನೆಗೆ ಮುಂದಾಗ್ತಿವಿ ಎಂದು ಶರವಣ ಎಚ್ಚರಿಕೆ ನೀಡಿದರು.

ತುಮಕೂರಿನ ವಿಶ್ವಾಸ ಜ್ಯುಯಲರ್ಸ್ ಮೇಲೆ ನಿನ್ನೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲಿ ಮಾಲೀಕ ಇಲ್ಲದ ಕಾರಣಕ್ಕೆ, ಅವರ ಮನೆಗೆ ಕಳ್ಳನ ರೀತಿ ಹುಡುಕಿಕೊಂಡು ಹೋಗಿದ್ದಾರೆ. ನೋಟಿಸ್ ಕೊಟ್ಟು ತಪಾಸಣೆ ಬನ್ನಿ, ಬೇಡ ಅನ್ನಲ್ಲ. ಸರ್ಕಾರ ನೆಡೆಸುವ ಮಂತ್ರಿಗಳು ಮೊದಲು ಸರಿ ಇದ್ದಾರಾ ನೋಡಿಕೊಳ್ಳಿ. ಚಿಕ್ಕವರಿಗೆ ಒಂದು ನ್ಯಾಯ, ದೊಡ್ಡವರಿಗೆ ಮತ್ತೊಂದು ನ್ಯಾಯಾನಾ? ಕುಮಾರಸ್ವಾಮಿಯವರ ಮನೆಯಲ್ಲಿ ಇದ್ದ ಲಾಕೆಟ್ ನಕಲಿ. ಅದನ್ನು ನಾನೇ ಪರಿಶೀಲಿಸಿ ಅಧಿಕಾರಿಗಳಿಗೆ ಒಪ್ಪಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.

lokesh

Recent Posts

ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ: ಸಚಿವ ಕೆ.ಎಚ್.ಮುನಿಯಪ್ಪ

ಬೆಳಗಾವಿ: ರಾಜ್ಯದಲ್ಲಿ 1517 ಹೊಸ ನ್ಯಾಯಬೆಲೆ ಅಂಗಡಿಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ…

2 mins ago

ಬೆಂಗಳೂರಿನಲ್ಲಿ ಸಾಕು ಪ್ರಾಣಿಗಳ ಮಾರಣಹೋಮ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…

55 mins ago

ನಾಯಕತ್ವ ಬಗ್ಗೆ ಯತೀಂದ್ರ ಹೇಳಿಕೆ: ಇದಕ್ಕೆ ಸಿಎಂ ಉತ್ತರಿಸಲಿ ಎಂದ ಡಿ.ಕೆ.ಶಿವಕುಮಾರ್‌

ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…

1 hour ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ…

2 hours ago

ಪೊಲೀಸ್‌ ಇಲಾಖೆಯಲ್ಲಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಪರಮೇಶ್ವರ್‌

ಬೆಳಗಾವಿ: ಪೊಲೀಸ್‌ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…

2 hours ago

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ: ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್‌…

3 hours ago