ಬೆಂಗಳೂರು : ಹುಲಿ ಉಗುರು ವಿಚಾರವಾಗಿ ರಾಜ್ಯದ ಚಿನ್ನದ ಅಂಗಡಿಗಳ ಮಾಲೀಕರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿನ್ನದ ಅಂಗಡಿ ಮಾಲೀಕರಾದ ಟಿ.ಎ. ಶರವಣ ಆರೋಪ ಮಾಡಿದರು.
ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲಿ ಉಗುರು ವಿಚಾರವಾಗಿ ಚಿನ್ನದ ಅಂಗಡಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಾ ಇದ್ದಾರೆ. ನೋಟಿಸ್ ಕೊಡದೆ, ತಪಾಸಣೆ ನಡೆಸದೆ ವರ್ತೂರು ಸಂತೋಷ್ ಅವರನ್ನು ಅರೆಸ್ಟ್ ಮಾಡಿದ್ದು ಸರಿಯಲ್ಲ. ರಾಜ್ಯದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಿವೆ, ಅದರ ಪರಿಹಾರಕ್ಕೆ ಸರ್ಕಾರ ಗಮನ ಹರಿಸೋಕೆ ಆಗ್ತಿಲ್ವ ಎಂದು ವಾಗ್ದಾಳಿ ನಡೆಸಿದರು.
ಯಾವ ವಿಚಾರವನ್ನು ಮುಚ್ಚಿಡೋಕ್ಕೆ ಹುಲಿ ಉಗುರು ವಿಷಯವನ್ನು ಹೈಲೈಟ್ ಮಾಡ್ತಾ ಇದ್ದೀರಾ? ಅಸಲಿ ಹುಲಿ ಉಗುರು ಧರಿಸೋ ಶಕ್ತಿ ಯಾರಿಗೂ ಇಲ್ಲ. ಹಸುವಿನ ಕೊಂಬು ಹಾಗೂ ಸಿಂತೆಟಿಕ್ ವಸ್ತುವಿನಿಂದ ಅಕ್ಕಸಾಲಿಗರಿಂದ ಮಾಡಿಸಿರೋದು. ಹುಲಿ ಉಗುರು ಅಷ್ಟೇನಾ, ಆನೆ ಕೂದಲೂ ಕಾಣಲ್ವಾ? ಆನೇ ಕೂದಲು, ಹುಲಿ ಉಂಗುರು ಎಂದು ನಾವು ಮಾರುತ್ತಿರುವುದು ಕಪ್ಪು ಪ್ಲಾಸ್ಟಿಕ್ ಪೈಪ್ ಪ್ರಾಣಿಗಳ ಬಗ್ಗೆ ಅಷ್ಟೊಂದು ಕಾಳಜಿ ಇದ್ರೆ ಮೊದಲು ಜನರಲ್ಲಿ ಜಾಗೃತಿ ಮೂಡಿಸಿ ಎಂದರು.
ಅರ್ಚಕರು, ರಾಜಕೀಯ ವ್ಯಕ್ತಿಗಳು, ಸಿನಿ ತಾರೆಯರ ಮೇಲೆ ದಾಳಿ ಮಾಡೋದು ಬಿಡಿ. ನಿಜ್ವಾಗ್ಲೂ ಯಾರ ಬಳಿ ಇದೆ ಅಂಥವರಿಗೆ ವಾಪಾಸ್ ಕೊಡೋಕೆ 2 ತಿಂಗಳು ಟೈಮ್ ಕೊಡಿ. ಅದನ್ನು ಬಿಟ್ಟು ಒಡವೆ ಅಂಗಡಿಗಳ ಮೇಲೆ ದಾಳಿ ಮಾಡಿ, ದಬ್ಬಾಳಿಕೆ ಮಾಡೋದು ಸರಿಯಲ್ಲ. ಹೀಗೆ ಮುಂದುವರಿದರೆ ನಾವು ಪ್ರತಿಭಟನೆಗೆ ಮುಂದಾಗ್ತಿವಿ ಎಂದು ಶರವಣ ಎಚ್ಚರಿಕೆ ನೀಡಿದರು.
ತುಮಕೂರಿನ ವಿಶ್ವಾಸ ಜ್ಯುಯಲರ್ಸ್ ಮೇಲೆ ನಿನ್ನೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲಿ ಮಾಲೀಕ ಇಲ್ಲದ ಕಾರಣಕ್ಕೆ, ಅವರ ಮನೆಗೆ ಕಳ್ಳನ ರೀತಿ ಹುಡುಕಿಕೊಂಡು ಹೋಗಿದ್ದಾರೆ. ನೋಟಿಸ್ ಕೊಟ್ಟು ತಪಾಸಣೆ ಬನ್ನಿ, ಬೇಡ ಅನ್ನಲ್ಲ. ಸರ್ಕಾರ ನೆಡೆಸುವ ಮಂತ್ರಿಗಳು ಮೊದಲು ಸರಿ ಇದ್ದಾರಾ ನೋಡಿಕೊಳ್ಳಿ. ಚಿಕ್ಕವರಿಗೆ ಒಂದು ನ್ಯಾಯ, ದೊಡ್ಡವರಿಗೆ ಮತ್ತೊಂದು ನ್ಯಾಯಾನಾ? ಕುಮಾರಸ್ವಾಮಿಯವರ ಮನೆಯಲ್ಲಿ ಇದ್ದ ಲಾಕೆಟ್ ನಕಲಿ. ಅದನ್ನು ನಾನೇ ಪರಿಶೀಲಿಸಿ ಅಧಿಕಾರಿಗಳಿಗೆ ಒಪ್ಪಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಬಿಜೆಪಿ ಶಾಸಕ ಭೈರತಿ ಬಸವರಾಜ್ ಅವರನ್ನು ಸಿಐಡಿ ಕಸ್ಟಡಿಗೆ ವಹಿಸಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಮಹಾಶಿವರಾತ್ರಿಯ ಜಾತ್ರಾ…
ನಂಜನಗೂಡು: ನಂಜನಗೂಡು ಪಟ್ಟಣದಲ್ಲಿರುವ ಸರ್ಕಾರಿ ತಾಯಿ-ಮಕ್ಕಳ ಆಸ್ಪತ್ರೆಗೆ ಕಳೆದ ತಡರಾತ್ರಿ ನಂಜನಗೂಡು ಕ್ಷೇತ್ರದ ಶಾಸಕ ದರ್ಶನ್ ಧ್ರುವನಾರಾಯಣ್ ಅವರು ದಿಢೀರ್…
ಮಂಡ್ಯ: ಯತೀಂದ್ರ ಸಿದ್ದರಾಮಯ್ಯ ಅವರು ನಮ್ಮ ಹೈಕಮಾಂಡ್. ನಮಗೆ ಹೈಕಮಾಂಡ್ ನೋಟಿಸ್ ಕೊಡಬಹುದು. ಆದರೆ ಹೈಕಮಾಂಡ್ಗೆ ನಾವು ನೋಟಿಸ್ ಕೊಡಲು…
ಬೆಂಗಳೂರು: ರಾಜ್ಯದಲ್ಲಿ ಚಳಿಯ ಅಬ್ಬರ, ಶೀತ ಸಂಪೂರ್ಣ ಕಡಿಮೆಯಾಗಿದ್ದು, ಒಣ ಹವೆಯ ಜೊತೆಗೆ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದೆ. ಶಿವರಾತ್ರಿ…
ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಬಸರಾಳು ಸಮೀಪದ ಕಾರೆಕಟ್ಟೆ ಬಳಿ ಕೀರ್ತಿ…