ಬೆಂಗಳೂರು : ಹುಲಿ ಉಗುರು ವಿಚಾರವಾಗಿ ರಾಜ್ಯದ ಚಿನ್ನದ ಅಂಗಡಿಗಳ ಮಾಲೀಕರ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಚಿನ್ನದ ಅಂಗಡಿ ಮಾಲೀಕರಾದ ಟಿ.ಎ. ಶರವಣ ಆರೋಪ ಮಾಡಿದರು.
ಬೆಂಗಳೂರು ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹುಲಿ ಉಗುರು ವಿಚಾರವಾಗಿ ಚಿನ್ನದ ಅಂಗಡಿಗಳ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ದೌರ್ಜನ್ಯ ಮಾಡ್ತಾ ಇದ್ದಾರೆ. ನೋಟಿಸ್ ಕೊಡದೆ, ತಪಾಸಣೆ ನಡೆಸದೆ ವರ್ತೂರು ಸಂತೋಷ್ ಅವರನ್ನು ಅರೆಸ್ಟ್ ಮಾಡಿದ್ದು ಸರಿಯಲ್ಲ. ರಾಜ್ಯದಲ್ಲಿ ಎಷ್ಟೆಲ್ಲಾ ಸಮಸ್ಯೆಗಳಿವೆ, ಅದರ ಪರಿಹಾರಕ್ಕೆ ಸರ್ಕಾರ ಗಮನ ಹರಿಸೋಕೆ ಆಗ್ತಿಲ್ವ ಎಂದು ವಾಗ್ದಾಳಿ ನಡೆಸಿದರು.
ಯಾವ ವಿಚಾರವನ್ನು ಮುಚ್ಚಿಡೋಕ್ಕೆ ಹುಲಿ ಉಗುರು ವಿಷಯವನ್ನು ಹೈಲೈಟ್ ಮಾಡ್ತಾ ಇದ್ದೀರಾ? ಅಸಲಿ ಹುಲಿ ಉಗುರು ಧರಿಸೋ ಶಕ್ತಿ ಯಾರಿಗೂ ಇಲ್ಲ. ಹಸುವಿನ ಕೊಂಬು ಹಾಗೂ ಸಿಂತೆಟಿಕ್ ವಸ್ತುವಿನಿಂದ ಅಕ್ಕಸಾಲಿಗರಿಂದ ಮಾಡಿಸಿರೋದು. ಹುಲಿ ಉಗುರು ಅಷ್ಟೇನಾ, ಆನೆ ಕೂದಲೂ ಕಾಣಲ್ವಾ? ಆನೇ ಕೂದಲು, ಹುಲಿ ಉಂಗುರು ಎಂದು ನಾವು ಮಾರುತ್ತಿರುವುದು ಕಪ್ಪು ಪ್ಲಾಸ್ಟಿಕ್ ಪೈಪ್ ಪ್ರಾಣಿಗಳ ಬಗ್ಗೆ ಅಷ್ಟೊಂದು ಕಾಳಜಿ ಇದ್ರೆ ಮೊದಲು ಜನರಲ್ಲಿ ಜಾಗೃತಿ ಮೂಡಿಸಿ ಎಂದರು.
ಅರ್ಚಕರು, ರಾಜಕೀಯ ವ್ಯಕ್ತಿಗಳು, ಸಿನಿ ತಾರೆಯರ ಮೇಲೆ ದಾಳಿ ಮಾಡೋದು ಬಿಡಿ. ನಿಜ್ವಾಗ್ಲೂ ಯಾರ ಬಳಿ ಇದೆ ಅಂಥವರಿಗೆ ವಾಪಾಸ್ ಕೊಡೋಕೆ 2 ತಿಂಗಳು ಟೈಮ್ ಕೊಡಿ. ಅದನ್ನು ಬಿಟ್ಟು ಒಡವೆ ಅಂಗಡಿಗಳ ಮೇಲೆ ದಾಳಿ ಮಾಡಿ, ದಬ್ಬಾಳಿಕೆ ಮಾಡೋದು ಸರಿಯಲ್ಲ. ಹೀಗೆ ಮುಂದುವರಿದರೆ ನಾವು ಪ್ರತಿಭಟನೆಗೆ ಮುಂದಾಗ್ತಿವಿ ಎಂದು ಶರವಣ ಎಚ್ಚರಿಕೆ ನೀಡಿದರು.
ತುಮಕೂರಿನ ವಿಶ್ವಾಸ ಜ್ಯುಯಲರ್ಸ್ ಮೇಲೆ ನಿನ್ನೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅಲ್ಲಿ ಮಾಲೀಕ ಇಲ್ಲದ ಕಾರಣಕ್ಕೆ, ಅವರ ಮನೆಗೆ ಕಳ್ಳನ ರೀತಿ ಹುಡುಕಿಕೊಂಡು ಹೋಗಿದ್ದಾರೆ. ನೋಟಿಸ್ ಕೊಟ್ಟು ತಪಾಸಣೆ ಬನ್ನಿ, ಬೇಡ ಅನ್ನಲ್ಲ. ಸರ್ಕಾರ ನೆಡೆಸುವ ಮಂತ್ರಿಗಳು ಮೊದಲು ಸರಿ ಇದ್ದಾರಾ ನೋಡಿಕೊಳ್ಳಿ. ಚಿಕ್ಕವರಿಗೆ ಒಂದು ನ್ಯಾಯ, ದೊಡ್ಡವರಿಗೆ ಮತ್ತೊಂದು ನ್ಯಾಯಾನಾ? ಕುಮಾರಸ್ವಾಮಿಯವರ ಮನೆಯಲ್ಲಿ ಇದ್ದ ಲಾಕೆಟ್ ನಕಲಿ. ಅದನ್ನು ನಾನೇ ಪರಿಶೀಲಿಸಿ ಅಧಿಕಾರಿಗಳಿಗೆ ಒಪ್ಪಿಸಿದ್ದೇನೆ ಎಂದು ಸ್ಪಷ್ಟನೆ ನೀಡಿದರು.
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…