ರಾಜ್ಯ

ನನ್ನ ಹನಿಟ್ರ್ಯಾಪ್‌ ನಡೆದಿಲ್ಲ, ಪರಿಚಿತರನ್ನು ಬ್ಲಾಕ್‌ ಮೇಲ್‌ ಮಾಡಿದ್ದಾರೆ: ಹರೀಶ್‌ಗೌಡ ಸ್ಪಷ್ಟನೆ

ಬೆಂಗಳೂರು: ನನ್ನ ಹನಿಟ್ರ್ಯಾಪ್‌ ನಡೆದಿಲ್ಲ. ಗೌರವಯುತವಾಗಿ ಬದುಕುತ್ತಿರುವ ನನ್ನ ಪರಿಚಿತರಿಗೆ ಹನಿಟ್ರ್ಯಾಪ್‌ ಮಾಡಿ, ಬ್ಲಾಕ್‌ಮೇಲ್‌ ಮಾಡಲಾಗುತ್ತಿತ್ತು ಎಂದು ಶಾಸಕ ಹರೀಶ್‌ ಗೌಡ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹನಿಟ್ರ್ಯಾಪ್‌ ಆಗಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿ 8 ರಿಂದ 10 ಜನರಿಗೆ ಹನಿಟ್ರ್ಯಾಪ್‌ ಮಾಡಿದ್ದಾರೆ. ಅವರೆಲ್ಲಾ ನನಗೆ ಪರಿಚಯಸ್ಥರೇ. ಅವರಲ್ಲಿ ಒಬ್ಬರು ನನಗೆ ಈ ಮಾಹಿತಿಯನ್ನು ತಿಳಿಸಿದ್ದರು. ಅವರೆಲ್ಲರೂ ಗೌರವಯುತವಾಗಿ ಬದುಕುತ್ತಿರುವವರು ಹೀಗಾಗಿ ದೂರು ನೀಡಿದ್ದೆ ಎಂದು ಹೇಳಿದರು.

ಮೈಸೂರು ಹಾಗೂ ಬೆಂಗಳೂರು ಎರಡು ಕಡೆಯೂ ಈ ರೀತಿಯ ತೊಂದರೆ ಕೊಡುವ ಕೆಲಸವಾಗುತ್ತಿತ್ತು. ಹಾಗಾಗಿ, ಬೆಂಗಳೂರು ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ್ದೆ. ದೂರಿನ ಅನ್ವಯ ಇಬ್ಬರನ್ನು ಬಂಧಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರು ಮೈಸೂರಿನವರಾದ್ರೂ ಅವರು ಯಾರು ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಯಾವುದೇ ರಾಜಕೀಯ ಷಡ್ಯಂತ್ರ ನಡೆದಿಲ್ಲ ಎಂದರು.

ಆರೋಪಿಗಳ ವಿರುದ್ಧ ಕಾನೂನಾತ್ಮಕವಾಗಿ ಏನು ಆಗಬೇಕು ಅದು ಆಗುತ್ತದೆ. ಹಣಕ್ಕಾಗಿ ಬೇಡಿಕೆ ಇಟ್ಟು ಫೋಟೋ ಮನೆಗೆ ಕಳುಹಿಸುವುದಾಗಿ ಬೆದರಿಸಿದ್ರು. ಉದ್ಯಮಿಗಳು, ಪ್ರೋಫೆಸರ್‌ಗಳಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಂಭ್ರಮದಿಂದ ಹೊಸ ವರ್ಷವನ್ನು ಬರಮಾಡಿಕೊಂಡ ಮೈಸೂರಿಗರು

ಮೈಸೂರು: ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಜಗಮಗಿಸುವ ದೀಪಾಲಂಕಾರ, ಫಲಪುಷ್ಪ ಪ್ರದರ್ಶನದ ಸೊಬಗಿನ ಮಧ್ಯೆ ಪಾರಂಪರಿಕ ಪೊಲೀಸ್‌ ಬ್ಯಾಂಡ್‌ನ ಸದ್ದಿನೊಂದಿಗೆ…

8 hours ago

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಕಾಫಿ ಪುಡಿ ಅಂಗಡಿ ಬೆಂಕಿಗಾಹುತಿ

ಕೊಳ್ಳೇಗಾಲ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ರಸ್ತೆಯಲ್ಲಿರುವ ಸಾಕಮ್ಮಾಸ್ ಕಾಫಿ ಪುಡಿ ಅಂಗಡಿ ಬುಧವಾರ ರಾತ್ರಿ ಸಂಪೂರ್ಣ…

8 hours ago

ಮೈಸೂರು, ಚಾ.ನಗರ, ಮಂಡ್ಯ, ಕೊಡಗು ಎಸ್‌ಪಿಗಳ ವರ್ಗ

ಮೈಸೂರು: ರಾಜ್ಯದ ವಿವಿಧೆಡೆ ಸೇವೆ ಸಲ್ಲಿಸುತ್ತಿದ್ದ 25 ಮಂದಿ ಐಪಿಎ ಅಧಿಕಾರಿಗಳನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ನೀಡಿದೆ. ಅವರಲ್ಲಿ…

9 hours ago

ಕೊಡಗು ಜಿಲ್ಲೆಯ ನೂತನ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ಬಿಂದುಮಣಿ ನೇಮಕ

ಕೊಡಗು: ಕರ್ನಾಟಕ ಸರ್ಕಾರದ ಆದೇಶದಂತೆ ಕೊಡಗಿನ ಪೊಲೀಸ್‌ ವರಿಷ್ಠಾಧಿಕಾರಿ ರಾಮರಾಜನ್‌ ಅವರನ್ನು ಬೆಳಗಾವಿ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ. ಖಾಲಿಯಾದ ಸ್ಥಳಕ್ಕೆ…

9 hours ago

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ ಸೇರಿದ ಟೇಲ್ಸ್ ಬೈ ಪರಿ ಕೃತಿಯ ಪುಟ್ಟ ಲೇಖಕಿ ಪರಿಣಿತಾ

ಬೆಂಗಳೂರು: ಸಣ್ಣ ವಯಸ್ಸಿನಿಂದಲೇ ಬರವಣಿಗೆ ರೂಢಿಸಿಕೊಂಡು 9ನೇ ವಯಸ್ಸಿಗೆ 'ಟೇಲ್ಸ್ ಬೈ ಪರಿ' ಪುಸ್ತಕವನ್ನು ಬರೆದು ಹೆಸರು ಮಾಡಿರುವ ನಮ್ಮ…

12 hours ago

ಅಕ್ರಮ ನಿವಾಸಿಗಳಿಗೆ ಮನೆ: ಸರ್ಕಾರದ ವಿರುದ್ಧ ವಿ.ಸೋಮಣ್ಣ ಆಕ್ರೋಶ

ನವದೆಹಲಿ: ಕೋಗಿಲು ಲೇಔಟ್‌ನಲ್ಲಿ ಅಕ್ರಮ ನಿವಾಸಿಗಳಿಗೆ ಮನೆ ನೀಡುತ್ತಿದ್ದಾರೆ. ಇದು ರಾಜ್ಯ ಸರ್ಕಾರದ ದಡ್ಡತನದ ಪರಮಾವಧಿ ಎಂದು ಕೇಂದ್ರ ಸಚಿವ…

12 hours ago