ಬೆಂಗಳೂರು: ನನ್ನ ಹನಿಟ್ರ್ಯಾಪ್ ನಡೆದಿಲ್ಲ. ಗೌರವಯುತವಾಗಿ ಬದುಕುತ್ತಿರುವ ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ಮೇಲ್ ಮಾಡಲಾಗುತ್ತಿತ್ತು ಎಂದು ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹನಿಟ್ರ್ಯಾಪ್ ಆಗಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿ 8 ರಿಂದ 10 ಜನರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ. ಅವರೆಲ್ಲಾ ನನಗೆ ಪರಿಚಯಸ್ಥರೇ. ಅವರಲ್ಲಿ ಒಬ್ಬರು ನನಗೆ ಈ ಮಾಹಿತಿಯನ್ನು ತಿಳಿಸಿದ್ದರು. ಅವರೆಲ್ಲರೂ ಗೌರವಯುತವಾಗಿ ಬದುಕುತ್ತಿರುವವರು ಹೀಗಾಗಿ ದೂರು ನೀಡಿದ್ದೆ ಎಂದು ಹೇಳಿದರು.
ಮೈಸೂರು ಹಾಗೂ ಬೆಂಗಳೂರು ಎರಡು ಕಡೆಯೂ ಈ ರೀತಿಯ ತೊಂದರೆ ಕೊಡುವ ಕೆಲಸವಾಗುತ್ತಿತ್ತು. ಹಾಗಾಗಿ, ಬೆಂಗಳೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದೆ. ದೂರಿನ ಅನ್ವಯ ಇಬ್ಬರನ್ನು ಬಂಧಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರು ಮೈಸೂರಿನವರಾದ್ರೂ ಅವರು ಯಾರು ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಯಾವುದೇ ರಾಜಕೀಯ ಷಡ್ಯಂತ್ರ ನಡೆದಿಲ್ಲ ಎಂದರು.
ಆರೋಪಿಗಳ ವಿರುದ್ಧ ಕಾನೂನಾತ್ಮಕವಾಗಿ ಏನು ಆಗಬೇಕು ಅದು ಆಗುತ್ತದೆ. ಹಣಕ್ಕಾಗಿ ಬೇಡಿಕೆ ಇಟ್ಟು ಫೋಟೋ ಮನೆಗೆ ಕಳುಹಿಸುವುದಾಗಿ ಬೆದರಿಸಿದ್ರು. ಉದ್ಯಮಿಗಳು, ಪ್ರೋಫೆಸರ್ಗಳಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…