ಬೆಂಗಳೂರು: ನನ್ನ ಹನಿಟ್ರ್ಯಾಪ್ ನಡೆದಿಲ್ಲ. ಗೌರವಯುತವಾಗಿ ಬದುಕುತ್ತಿರುವ ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ಮೇಲ್ ಮಾಡಲಾಗುತ್ತಿತ್ತು ಎಂದು ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹನಿಟ್ರ್ಯಾಪ್ ಆಗಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿ 8 ರಿಂದ 10 ಜನರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ. ಅವರೆಲ್ಲಾ ನನಗೆ ಪರಿಚಯಸ್ಥರೇ. ಅವರಲ್ಲಿ ಒಬ್ಬರು ನನಗೆ ಈ ಮಾಹಿತಿಯನ್ನು ತಿಳಿಸಿದ್ದರು. ಅವರೆಲ್ಲರೂ ಗೌರವಯುತವಾಗಿ ಬದುಕುತ್ತಿರುವವರು ಹೀಗಾಗಿ ದೂರು ನೀಡಿದ್ದೆ ಎಂದು ಹೇಳಿದರು.
ಮೈಸೂರು ಹಾಗೂ ಬೆಂಗಳೂರು ಎರಡು ಕಡೆಯೂ ಈ ರೀತಿಯ ತೊಂದರೆ ಕೊಡುವ ಕೆಲಸವಾಗುತ್ತಿತ್ತು. ಹಾಗಾಗಿ, ಬೆಂಗಳೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದೆ. ದೂರಿನ ಅನ್ವಯ ಇಬ್ಬರನ್ನು ಬಂಧಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರು ಮೈಸೂರಿನವರಾದ್ರೂ ಅವರು ಯಾರು ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಯಾವುದೇ ರಾಜಕೀಯ ಷಡ್ಯಂತ್ರ ನಡೆದಿಲ್ಲ ಎಂದರು.
ಆರೋಪಿಗಳ ವಿರುದ್ಧ ಕಾನೂನಾತ್ಮಕವಾಗಿ ಏನು ಆಗಬೇಕು ಅದು ಆಗುತ್ತದೆ. ಹಣಕ್ಕಾಗಿ ಬೇಡಿಕೆ ಇಟ್ಟು ಫೋಟೋ ಮನೆಗೆ ಕಳುಹಿಸುವುದಾಗಿ ಬೆದರಿಸಿದ್ರು. ಉದ್ಯಮಿಗಳು, ಪ್ರೋಫೆಸರ್ಗಳಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…