ಬೆಂಗಳೂರು: ನನ್ನ ಹನಿಟ್ರ್ಯಾಪ್ ನಡೆದಿಲ್ಲ. ಗೌರವಯುತವಾಗಿ ಬದುಕುತ್ತಿರುವ ನನ್ನ ಪರಿಚಿತರಿಗೆ ಹನಿಟ್ರ್ಯಾಪ್ ಮಾಡಿ, ಬ್ಲಾಕ್ಮೇಲ್ ಮಾಡಲಾಗುತ್ತಿತ್ತು ಎಂದು ಶಾಸಕ ಹರೀಶ್ ಗೌಡ ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹನಿಟ್ರ್ಯಾಪ್ ಆಗಿಲ್ಲ. ಆದರೆ, ನನ್ನ ಕ್ಷೇತ್ರದಲ್ಲಿ 8 ರಿಂದ 10 ಜನರಿಗೆ ಹನಿಟ್ರ್ಯಾಪ್ ಮಾಡಿದ್ದಾರೆ. ಅವರೆಲ್ಲಾ ನನಗೆ ಪರಿಚಯಸ್ಥರೇ. ಅವರಲ್ಲಿ ಒಬ್ಬರು ನನಗೆ ಈ ಮಾಹಿತಿಯನ್ನು ತಿಳಿಸಿದ್ದರು. ಅವರೆಲ್ಲರೂ ಗೌರವಯುತವಾಗಿ ಬದುಕುತ್ತಿರುವವರು ಹೀಗಾಗಿ ದೂರು ನೀಡಿದ್ದೆ ಎಂದು ಹೇಳಿದರು.
ಮೈಸೂರು ಹಾಗೂ ಬೆಂಗಳೂರು ಎರಡು ಕಡೆಯೂ ಈ ರೀತಿಯ ತೊಂದರೆ ಕೊಡುವ ಕೆಲಸವಾಗುತ್ತಿತ್ತು. ಹಾಗಾಗಿ, ಬೆಂಗಳೂರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದೆ. ದೂರಿನ ಅನ್ವಯ ಇಬ್ಬರನ್ನು ಬಂಧಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಬಂಧಿತರು ಮೈಸೂರಿನವರಾದ್ರೂ ಅವರು ಯಾರು ನನಗೆ ಗೊತ್ತಿಲ್ಲ. ನನ್ನ ವಿರುದ್ಧ ಯಾವುದೇ ರಾಜಕೀಯ ಷಡ್ಯಂತ್ರ ನಡೆದಿಲ್ಲ ಎಂದರು.
ಆರೋಪಿಗಳ ವಿರುದ್ಧ ಕಾನೂನಾತ್ಮಕವಾಗಿ ಏನು ಆಗಬೇಕು ಅದು ಆಗುತ್ತದೆ. ಹಣಕ್ಕಾಗಿ ಬೇಡಿಕೆ ಇಟ್ಟು ಫೋಟೋ ಮನೆಗೆ ಕಳುಹಿಸುವುದಾಗಿ ಬೆದರಿಸಿದ್ರು. ಉದ್ಯಮಿಗಳು, ಪ್ರೋಫೆಸರ್ಗಳಿಗೆ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ತನಿಖೆಯಿಂದ ಎಲ್ಲವೂ ಹೊರಬರಲಿದೆ ಎಂದರು.
ಜಿಲ್ಲೆಯಲ್ಲಿ ೧೧ ಮಂದಿ ಸಾವು ಮುಂಜಾಗ್ರತೆ ಪಾಲಿಸುವುದು ಅಗತ್ಯ ಮೈಸೂರು: ಬಿರು ಬೇಸಿಗೆ ಸಂದರ್ಭದಲ್ಲಿ ನದಿ, ಕೆರೆ ಹಾಗೂ ಕಾಲುವೆಗಳಲ್ಲಿ…
ಪ್ರೊ.ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮೈಸೂರು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ ಎಸ್.ಎಂ.ಕೃಷ್ಣ ಪ್ರಶಸ್ತಿ ಪುರಸ್ಕಾರ ಮಂಡ್ಯ ಜಿಲ್ಲೆಯ…
ಚಿರಂಜೀವಿ ಸಿ.ಹುಲ್ಲಹಳ್ಳಿ ೩,೭೫೦ ರೂ., ಶೇ.೧೮ರಷ್ಟು ಜಿಎಸ್ಟಿ ಸೇರಿ ಒಟ್ಟು ೪,೭೫೦ ರೂ.ಶುಲ್ಕ ಪ್ರತಿ ಶಿಬಿರಾರ್ಥಿಗೆ ನಿಗದಿ ಮೈಸೂರು: ಮಲ್ಲಿಗೆ…
ಕೆ.ಬಿ.ರಮೇಶನಾಯಕ ಬಯೋಮೆಟ್ರಿಕ್ ಹಾಜರಾತಿ ಜತೆಗೆ ಜಿಪಿಎಸ್ ವ್ಯವಸ್ಥೆ ಜಾರಿಗೆ ಚಿಂತನೆ ಹಾಜರಾತಿ ಹಾಕಿ ಬೇಕಾಬಿಟ್ಟಿ ಓಡಾಡುವ ಸಿಬ್ಬಂದಿಗಳಿಗೆ ಬ್ರೇಕ್ ಮೈಸೂರು:…
ಪ್ರಶಾಂತ್ ಎಸ್. ಮೈಸೂರು: ಎಲ್ಲೆಡೆ ಬಿರು ಬಿಸಿಲು ಜನರನ್ನು ಹೈರಾಣಾಗಿಸುತ್ತಿದೆ. ಬಿಸಿಲ ಬೇಗೆಯಿಂದ ದಾಹ ನೀಗಿಸಿಕೊಳ್ಳಲು ಜನರು ಎಳನೀರು ಮೊರೆ…
ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಸಮರದಲ್ಲಿ ಕೈ ಜಯಭೇರಿ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪ…