ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು.ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಇದನ್ನು ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು.
50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದರು.
ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಮಾತನಾಡಿದ ಅವರು, ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಬಣ್ಣ ಕಟ್ಟಲಾಗ್ತಿದೆ ಎಂದು ಸ್ಪಷ್ಟನೆ ನೀಡಿದರು.
ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ನಾವು ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ತನಿಖೆ ಆಗಲಿದೆ ಎಂದು ಹೇಳಿದರು.
ಹನೂರು : ತಾಲೂಕಿನ ಶೆಟ್ಟಳ್ಳಿ ಗ್ರಾಮದಲ್ಲಿ ಒಕ್ಕಣೆ ಕಣದಲ್ಲಿ ಹಾಕಲಾಗಿದ್ದ ರಾಗಿ ಫಸಲಿಗೆ ಬೆಂಕಿ ಬಿದ್ದು ಸುಮಾರು 30 ಕ್ವಿಂಟಾಲ್…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ತುಸು ಏರುಪೇರು ಆದ ಕಾರಣ, ಇಂದು (ಡಿಸೆಂಬರ್ 17) ವಿಧಾನಸಭೆ ಅಧಿವೇಶನದಲ್ಲಿ…
ನಂಜನಗೂಡು : ದಕ್ಷಿಣ ಕಾಶಿ ಎಂದೇ ಹೆಸರಾಗಿರುವ, ಆದಾಯದಲ್ಲಿ ರಾಜ್ಯದಲ್ಲಿ ಐದನೇ ಸ್ಥಾನದಲ್ಲಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಯದಲ್ಲಿ ಲಕ್ಷಾಂತರ ರೂ.…
ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಥಿಯೋಪಿಯಾದ ಅತ್ಯುನ್ನತ ಪ್ರಶಸ್ತಿ ‘ದಿ ಗ್ರೇಟ್ ಆನರ್ ನಿಶಾನ್ ಆಫ್ ಇಥಿಯೋಪಿಯಾ’…
ಮಂಗಳೂರು : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟ ಪ್ರಕರಣದಲ್ಲಿ ವಿಶೇಷ ತನಿಖಾ ತಂಡದಿಂದ ಬಂಧನಕ್ಕೆ ಒಳಗಾದ ಚಿನ್ನಯ್ಯ ಕೊನೆಗೂ…
ಮಂಡ್ಯ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಕೈಗಾರಿಕೆಯನ್ನು ತರುವರೋ ತರಲಿ. ಮಳವಳ್ಳಿ ಕ್ಷೇತ್ರದಲ್ಲಿ 400ರಿಂದ 500 ಎಕರೆ…