ರಾಜ್ಯ

ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ : ಸಿಎಂ ಸಿದ್ದರಾಮಯ್ಯ

ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು.ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಇದನ್ನು ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು.

50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದರು.

ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಮಾತನಾಡಿದ ಅವರು, ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಬಣ್ಣ ಕಟ್ಟಲಾಗ್ತಿದೆ ಎಂದು ಸ್ಪಷ್ಟನೆ ನೀಡಿದರು.

ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ನಾವು ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ತನಿಖೆ ಆಗಲಿದೆ ಎಂದು ಹೇಳಿದರು.

lokesh

Recent Posts

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

5 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

8 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

8 hours ago

ಅಮರನಾಥ ಯಾತ್ರೆಗೆ ಏಪ್ರಿಲ್.15ರಿಂದ ನೋಂದಣಿ‌

ನವದೆಹಲಿ: ಇದೇ ಏಪ್ರಿಲ್.‌15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…

8 hours ago

ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…

8 hours ago

ಪ್ರಧಾನಿ ಮೋದಿ-ರಾಹುಲ್ ಗಾಂಧಿ ಮಾತುಕತೆ: ವಿಡಿಯೋ ವೈರಲ್

ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…

8 hours ago