ರಾಜ್ಯ

ಹರೀಶ್ ಪೂಂಜಾ ರಾಜಕೀಯದಲ್ಲಿ ಇನ್ನೂ ಬಚ್ಚಾ : ಸಿಎಂ ಸಿದ್ದರಾಮಯ್ಯ

ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.

ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು.ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಇದನ್ನು ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು.

50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದರು.

ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಮಾತನಾಡಿದ ಅವರು, ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಬಣ್ಣ ಕಟ್ಟಲಾಗ್ತಿದೆ ಎಂದು ಸ್ಪಷ್ಟನೆ ನೀಡಿದರು.

ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ನಾವು ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ತನಿಖೆ ಆಗಲಿದೆ ಎಂದು ಹೇಳಿದರು.

lokesh

Recent Posts

ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: ಡಿ.ಕೆ.ಸುರೇಶ್‌ ಪುನರುಚ್ಛಾರ

ಬೆಂಗಳೂರು: ನನಗೆ ಈಗಲೂ ಭರವಸೆಯಿದೆ. ಸಿಎಂ ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಹೇಳಿದರು. ಈ…

12 mins ago

ಸಚಿವ ಎಂ.ಬಿ.ಪಾಟೀಲ್‌ ನಡೆ ಸ್ವಾಗತಿಸಿದ ಸಚಿವ ಚಲುವರಾಯಸ್ವಾಮಿ: ಕಾರಣ ಇಷ್ಟೇ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ 500 ಕೋಟಿ ವೆಚ್ಚದಲ್ಲಿ ಆಟೋ ಮೋಟಿವ್ ರಿಸರ್ಚ್ ಆಸೋಸಿಯೇಷನ್ ಆಪ್ ಇಂಡಿಯಾ ಸಂಶೋಧನಾ ಕೇಂದ್ರ…

24 mins ago

ಮಹಾಶಿವರಾತ್ರಿ ಜಾತ್ರೆಯ ಸಂಭ್ರಮ: ಮಲೆ ಮಹದೇಶ್ವರ ಬೆಟ್ಟಕ್ಕೆ ದ್ವಿಚಕ್ರ, ತ್ರಿಚಕ್ರ ವಾಹನಗಳ ಪ್ರವೇಶಕ್ಕೆ ಬ್ರೇಕ್‌

ಹನೂರು: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಮಹಾಶಿವರಾತ್ರಿ ಜಾತ್ರೆಯ ಹಿನ್ನೆಲೆಯಲ್ಲಿ ದ್ವಿಚಕ್ರ ಹಾಗೂ…

43 mins ago

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

1 hour ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

1 hour ago

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

6 hours ago