ಮಂಗಳೂರು : ಸಿಎಂ ಬಗ್ಗೆ ಶಾಸಕ ಹರೀಶ್ ಪೂಂಜಾ ಕಲೆಕ್ಷನ್ ಮಾಸ್ಟರ್ ಎಂಬ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ್ದಾರೆ.
ಹರೀಶ್ ಪೂಂಜಾ ಶಾಸಕನಾಗಿರೋದು ಮೊನ್ನೆ. ನಾನು 83 ರಿಂದ ಶಾಸಕನಾಗಿ, 85ರಲ್ಲೇ ಮಿನಿಸ್ಟರ್ ಆಗಿದ್ದವನು.ಯಾರೂ ನನ್ನನ್ನು ಈ ರೀತಿ ಕರೆದಿರಲಿಲ್ಲ. ಇವರು ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚಾ. ಇದನ್ನು ಹಿಂದಿನ ಬಿಜೆಪಿ ಸರ್ಕಾರ ಮತ್ತು ಬಿಜೆಪಿ ಮುಖ್ಯಮಂತ್ರಿಗಳಿಗೆ ಹೇಳಲಿ ಎಂದು ಕಿಡಿಕಾರಿದರು.
50 ಕೋಟಿ ಆಫರ್ ಬಗ್ಗೆ ನನಗೆ ಗೊತ್ತಿಲ್ಲ, ರವಿ ಹತ್ತಿರ ಕೇಳಿ. ಯಾರು ಹೇಳಿದ್ದಾರೋ ಅವರ ಹತ್ತಿರ ಕೇಳಿ. ನನಗೆ ಯಾವುದೇ ಮಾಹಿತಿ ಬಂದಿಲ್ಲ. ಬಿಜೆಪಿಯವರು ನಮ್ಮ ಸರ್ಕಾರ ಅಸ್ಥಿರ ಮಾಡಲು ಪ್ರಯತ್ನಿಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ. 50 ಕೋಟಿ ಕೊಟ್ಟು ಅಧಿಕಾರದ ಆಫರ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದರು.
ಪರಮೇಶ್ವರ್ ಮನೆಯಲ್ಲಿ ಡಿನ್ನರ್ ಪಾರ್ಟಿ ಕುರಿತಾಗಿ ಮಾತನಾಡಿದ ಅವರು, ಪರಮೇಶ್ವರ್ ಊಟಕ್ಕೆ ಕರೆದಿದ್ದರು, ಹೋಗಿದ್ದೇವೆ. ಅದಕ್ಕೆ ಮಸಾಲೆ ಯಾಕೆ ಹಾಕ್ತೀರಾ? ಅವರು ನನಗೆ, ಮಹಾದೇವಪ್ಪ, ಸತೀಶ್ ಜಾರಕಿಹೊಳಿಗೆ ಊಟಕ್ಕೆ ಕರೆದಿದ್ದರು. ಅಲ್ಲಿ ಯಾವುದೇ ರಾಜಕೀಯ ಇಲ್ಲ. ಅದೆಲ್ಲಾ ಸುಳ್ಳು. ಬಣ್ಣ ಕಟ್ಟಲಾಗ್ತಿದೆ ಎಂದು ಸ್ಪಷ್ಟನೆ ನೀಡಿದರು.
ಮೊದಲ ಹಂತದಲ್ಲಿ ಕೆಲ ಶಾಸಕರಿಗೆ ನಿಗಮ ಮಂಡಳಿ ಕೊಡುತ್ತೇವೆ. ಎರಡನೇ ಹಂತದಲ್ಲಿ ಕಾರ್ಯಕರ್ತರು, ನಾಯಕರಿಗೆ ಶೀಘ್ರವಾಗಿ ಹಂಚಿಕೆ ಮಾಡಲಾಗುತ್ತದೆ. ನಾವು ಬರ ಪರಿಹಾರ 7,900 ಕೋಟಿ ಕೇಳಿದ್ದೇವೆ. ಆದರೆ ಕೇಂದ್ರ ಸರ್ಕಾರ ಒಂದು ರೂ. ಪರಿಹಾರ ಕೊಟ್ಟಿಲ್ಲ. ಕೇಂದ್ರ ಸರ್ಕಾರ ಕರ್ನಾಟಕದ ಬಗ್ಗೆ ಮಲತಾಯಿ ಧೋರಣೆ ಹೊಂದಿದೆ ಎಂದರು. ಇನ್ನು ಕಾರ್ಕಳದ ಪರಶುರಾಮ ಮೂರ್ತಿ ಅಸಲಿನಾ? ನಕಲಿನಾ ಎಂಬುದರ ಕುರಿತು ತನಿಖೆ ಆಗಲಿದೆ ಎಂದು ಹೇಳಿದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…